ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

Published : Mar 10, 2021, 10:37 PM ISTUpdated : Mar 10, 2021, 10:39 PM IST
ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

ಸಾರಾಂಶ

ಮೀಸಲಾತಿಗೆ ಒತ್ತಾಯಿಸಿ ವಿವಿಧ ಸಮುದಾಯಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ, ವಿವಿಧ ಸಮುದಾಯಗಳ ಬೇಡಿಕೆ ಕುರಿತು ಪರಿಶೀಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಿತಿಯೊಂದನ್ನು ರಚಿಸಿದ್ದಾರೆ.

ಬೆಂಗಳೂರು, (ಮಾ.10): ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಕೋರಿ ಹೋರಾಟಗಳನ್ನು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.

 ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಟ್ವಿಟರ್ ಮೂಲಕ ಮಾಹಿತಿ ನೀಡಿದೆ. ಈ ಸಮತಿಗೆ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿಯವರನ್ನ ಅಧ್ಯಕ್ಷರನ್ನಾಗಿ ನೇಮಿಸಿದ್ದು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮತ್ತು ಮೈಸೂರು ಮಹಾರಾಣಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಿ.ವಿ. ವಸಂತಕುಮಾರ್ ಅವರನ್ನ ಸದಸ್ಯರನ್ನಾಗಿಸಿದೆ.

ಪಂಚಮಸಾಲಿಗೆ ಮೀಸಲಾತಿ: ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಸ್ವಾಮೀಜಿ 

ಸಚಿವ ಸಂಪುಟದ ತೀರ್ಮಾನದಂತೆ ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕ, ಕಾನೂನಾತ್ಮಕವಾಗಿ ಚೌಕಟ್ಟಿನಲ್ಲಿ ಪರೀಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ

ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಇತ್ತ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಡಿಕೆಯಿಟ್ಟು ನಗರದ ಫ್ರೀಡಂ ಪಾರ್ಕ್​ನಲ್ಲಿ ಸುದೀರ್ಘ ಧರಣಿ ನಡೆಸುವ ಮೂಲಕ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಿದೆ. ಈಗಾಗಲೇ ವಾಲ್ಮೀಕಿ ಸಮುದಾಯ ಮೀಸಲಾತಿ ಹೆಚ್ಚಿಸಬೇಕೆನ್ನುತ್ತಿದ್ದರೆ, ಕುರುಬ ಸಮುದಾಯ ಎಸ್‌ಟಿ ಸೇರ್ಪಡೆಗೆ ಆಗ್ರಹಿಸುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ