ಕೊರೋನಾತಂಕದ ಮಧ್ಯೆ ಬಸ್‌ ಪ್ರಯಾಣಿಕರ ಸಂಖ್ಯೆ ಏರಿಕೆ..!

Kannadaprabha News   | Asianet News
Published : Aug 02, 2020, 07:56 AM IST
ಕೊರೋನಾತಂಕದ ಮಧ್ಯೆ ಬಸ್‌ ಪ್ರಯಾಣಿಕರ ಸಂಖ್ಯೆ ಏರಿಕೆ..!

ಸಾರಾಂಶ

ರಾತ್ರಿ ಕರ್ಫ್ಯೂ ತೆರವು| ಬೆಂಗಳೂರಿನಲ್ಲಿ ರಾತ್ರಿ 10ರ ವರೆಗೂ ಬಸ್‌ ಸೇವೆ ಮುಂದುವರಿಸಲು ಬಿಎಂಟಿಸಿ ತೀರ್ಮಾನ| ಬಿಎಂಟಿಸಿಯು ಒಟ್ಟು 6,500 ಬಸ್‌ಗಳನ್ನು ಹೊಂದಿದ್ದು, 2,500 ಬಸ್‌ಗಳನ್ನು ಕಾರ್ಯಾಚರಣೆ| 500 ಬಸ್‌ಗಳನ್ನು ಕೊರೋನಾ ತುರ್ತು ಹಾಗೂ ಅಗತ್ಯ ಸೇವೆಗಳಿ ನಿಯೋಜನೆ| 2 ಲಕ್ಷದಿಂದ 8 ಲಕ್ಷಕ್ಕೆ ಏರಿದ ಪ್ರಯಾಣಿಕರ ಸಂಖ್ಯೆ|

ಬೆಂಗಳೂರು(ಆ.02):ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ ಏರಲು ಹಿಂದೇಟು ಹಾಕುತ್ತಿದ್ದ ಜನರು, ಇದೀಗ ನಿಧಾನವಾಗಿ ಬಸ್‌ ಪ್ರಯಾಣ ಆರಂಭಿಸಿರುವ ಸೂಚನೆಗಳಿವೆ. ಎರಡು ತಿಂಗಳ ಹಿಂದೆ ಎರಡು ಕೇವಲ 2 ಲಕ್ಷಕ್ಕೆ ಕುಸಿದಿದ್ದ ಪ್ರಯಾಣಿಕರ ಸಂಖ್ಯೆ ಇದೀಗ ಸುಮಾರು 8 ಲಕ್ಷಕ್ಕೆ ಏರಿಕೆಯಾಗಿದೆ.

ಕೊರೋನಾ ಸೋಂಕು ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಮಾರ್ಚ್‌ನಿಂದ ಮೇ ವರೆಗೆ ಲಾಕ್‌ಡೌನ್‌ ಜಾರಿ ಮಾಡಿದ್ದ ಪರಿಣಾಮ ಬಸ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ಲಾಕ್‌ಡೌನ್‌ ಸಡಿಲಿಕೆ ಬಳಿಕ ಮತ್ತೆ ಬಸ್‌ ಸೇವೆ ಪುನರಾರಂಭಿಸಿದ್ದ ಬಿಎಂಟಿಸಿಗೆ ಪ್ರಯಾಣಿಕರ ಕೊರತೆ ಎದುರಾಗಿತ್ತು. ಕೊರೋನಾ ಪೂರ್ವದಲ್ಲಿ ನಿತ್ಯ 35 ಲಕ್ಷ ಮಂದಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುತ್ತಿದ್ದರು. ಬಸ್‌ ಸೇವೆ ಪುನರಾರಂಭದ ಬಳಿಕ ಜನರು ಕೊರೋನಾ ಸೋಂಕು ಹರಡುವ ಭೀತಿಯಲ್ಲಿ ಬಸ್‌ಗಳಿಂದ ದೂರು ಉಳಿದ್ದರು.

BMTC ನೌಕರರಿಗಾಗಿ ಶೀಘ್ರ ಕೊರೋನಾ ಆರೈಕೆ ಕೇಂದ್ರ

3 ಸಾವಿರ ಬಸ್‌ ಕಾರ್ಯಾಚರಣೆ: 

ಬಿಎಂಟಿಸಿಯು ಒಟ್ಟು 6,500 ಬಸ್‌ಗಳನ್ನು ಹೊಂದಿದ್ದು, 2,500 ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಇದರೊಂದಿಗೆ 500 ಬಸ್‌ಗಳನ್ನು ಕೊರೋನಾ ತುರ್ತು ಹಾಗೂ ಅಗತ್ಯ ಸೇವೆಗಳಿಗೆ ನಿಯೋಜಿಸಿದೆ. ಇದೀಗ ದಿನಗಳೆದಂತೆ ಬಸ್‌ಗಳಿಗೆ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿರುವುದು ಸಂಕಷ್ಟದಲ್ಲಿರುವ ನಿಗಮಕ್ಕೆ ಸಂಜೀವಿನಿ ಸಿಕ್ಕಂತಾಗಿದೆ.

ರಾತ್ರಿ 10ರವರೆಗೂ ಬಸ್‌ ಸೇವೆ ಲಭ್ಯ

ರಾಜ್ಯ ಸರ್ಕಾರ ಭಾನುವಾರ ಲಾಕ್‌ಡೌನ್‌ ಹಿಂಪಡೆದಿರುವುದರಿಂದ ಇನ್ನು ಮುಂದೆ ಭಾನುವಾರವೂ ನಗರದಲ್ಲಿ ಬಿಎಂಟಿಸಿ ಬಸ್‌ ಸೇವೆ ಲಭ್ಯವಾಗಲಿದೆ. ಅಂತೆಯೆ ರಾತ್ರಿ ಕರ್ಫ್ಯೂ ತೆರವುಗೊಳಿಸಿರುವುದರಿಂದ ರಾತ್ರಿ 10ರ ವರೆಗೂ ಬಸ್‌ ಸೇವೆ ಮುಂದುವರಿಸಲು ಬಿಎಂಟಿಸಿ ತೀರ್ಮಾನಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!