ತಟ್ಟೆ, ಲೋಟ ಬಡಿದು ಧರಣಿ: ಕೋಡಿಹಳ್ಳಿ ಚಂದ್ರಶೇಖರ್‌

Kannadaprabha News   | Asianet News
Published : Apr 10, 2021, 07:35 AM IST
ತಟ್ಟೆ, ಲೋಟ ಬಡಿದು ಧರಣಿ: ಕೋಡಿಹಳ್ಳಿ ಚಂದ್ರಶೇಖರ್‌

ಸಾರಾಂಶ

ಮುಷ್ಕರ ಕೈಬಿಡುವ ಪ್ರಶ್ನೆಯೇ ಇಲ್ಲ. ಏ.12ರಂದು ರಾಜ್ಯದ ಎಲ್ಲ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸಾರಿಗೆ ನೌಕರರ ಕುಟುಂಬದ ಸದಸ್ಯರು ತಟ್ಟೆ-ಲೋಟ ಬಡಿದು ಸತ್ಯಾಗ್ರಹ ಮಾಡಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. 

ಬೆಂಗಳೂರು (ಏ.10): ಆರನೇ ವೇತನ ಆಯೋಗದ ಬೇಡಿಕೆ ಈಡೇರದೆ ಮುಷ್ಕರ ಕೈಬಿಡುವ ಪ್ರಶ್ನೆಯೇ ಇಲ್ಲ. ಏ.12ರಂದು ರಾಜ್ಯದ ಎಲ್ಲ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸಾರಿಗೆ ನೌಕರರ ಕುಟುಂಬದ ಸದಸ್ಯರು ತಟ್ಟೆ-ಲೋಟ ಬಡಿದು ಸತ್ಯಾಗ್ರಹ ಮಾಡಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. 
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೊಂಡು ಹಠ ಬಿಟ್ಟು ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು. ಸಾರಿಗೆ ನೌಕರರ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..! ..

 ರಾಜ್ಯ ಸರ್ಕಾರ ಆರನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವೈಜ್ಞಾನಿಕ ಕಾರಣ ನೀಡಬೇಕು. ಅದಕ್ಕೂ ಮುನ್ನ ನಮ್ಮ ಬೇಡಿಕೆ ಕೇಳಿ ಬಳಿಕ ಪ್ರತಿಕ್ರಿಯೆ ನೀಡಬೇಕು. ಸಾರಿಗೆ ನೌಕರರಿಗೆ ಯುಗಾದಿ ಹಬ್ಬಕ್ಕೆ ಬೋನಸ್‌ ಇಲ್ಲ. ಮಾಚ್‌ರ್‍ ತಿಂಗಳ ವೇತನವೂ ಇಲ್ಲ. ಹೀಗಾದರೆ ನೌಕರರು ಹಬ್ಬ ಮಾಡುವುದು ಹೇಗೆ ಪ್ರಶ್ನಿಸಿದರು.

ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಶನಿವಾರ ಬೆಳಗಾವಿ ಮತ್ತು ಕಲಬುರಗಿಯಲ್ಲಿ ಸಾರಿಗೆ ನೌಕರರ ಮುಖಂಡರ ಸಭೆ ಕರೆಯಲಾಗಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಕೋಡಿಹಳ್ಳಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ