ಪ್ರಯಾಣಿಕರಿಗೆ ಬಿಗ್ ಶಾಕ್: 4 ತಿಂಗ್ಳು ಬಸ್ ರಸ್ತೆಗಿಳಿಯಲ್ಲ

Published : May 17, 2020, 02:29 PM IST
ಪ್ರಯಾಣಿಕರಿಗೆ ಬಿಗ್ ಶಾಕ್: 4 ತಿಂಗ್ಳು ಬಸ್ ರಸ್ತೆಗಿಳಿಯಲ್ಲ

ಸಾರಾಂಶ

ಲಾಕ್​ಡೌನ್​ನಿಂದ ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು, ಅನೇಕರು ಬಸ್​ ಇಲ್ಲದ ಕಾರಣ ಊರಿಗೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥವರಿಗೆ ಇದೀಗ ಮತ್ತೆ ಬಿಗ್​ ಶಾಕ್​.

ಬೆಂಗಳೂರು, (ಮೇ.17): ಲಾಕ್ ಡೌನ್ ಜಾರಿಯಾದ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ ಮಾಲೀಕರು ಸದ್ಯಕ್ಕೆ ಬಸ್ ಸೇವೆಯನ್ನು ಆರಂಭಿಸದಿರಲು ತೀರ್ಮಾನ ಕೈಗೊಂಡಿದ್ದಾರೆ.

ಮುಂದಿನ ನಾಲ್ಕು ತಿಂಗಳು  ಖಾಸಗಿ ಬಸ್​ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಬಸ್​ಗಳ ಒಕ್ಕೂಟ ನಿರ್ಧರಿಸಿದೆ.

ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್‌ಗಾಗಿ ಮುಗಿಬಿದ್ದ ಸಿಬ್ಬಂದಿ!

ಲಾಕ್​ಡೌನ್​ನಿಂದಾಗಿ ಕಳೆದ ಎರಡು ತಿಂಗಳಿಂದ ಬಸ್​ಗಳು ರಸ್ತೆಗೆ ಇಳಿದಿಲ್ಲ. ಇದು ಬಸ್​ ಮಾಲೀಕರಿಗೆ ಭಾರೀ ಹೊರೆ ಆಗಿದೆ. ಹೀಗಾಗಿ ತೆರಿಗೆ ವಿನಾಯಿತಿ ನೀಡುವಂತೆ ಖಾಸಗಿ ಬಸ್​ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಸೆಪ್ಟೆಂಬರ್​ ವರೆಗೆ ಬಸ್​ಗಳನ್ನು ರಸ್ತೆಗೆ ಇಳಿಸುವುದಿಲ್ಲ ಎನ್ನುವ ಎಚ್ಚರಿಕೆ ನೀಡಿದೆ.

ಇದರಿಂದ ಪ್ರಯಾಣಿಕರಿಗೆ ಭಾರೀ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಖಾಸಗಿ ಬಸ್​ ಒಕ್ಕೂಟದ ಜೊತೆ ಸಂಧಾನ ಮಾತುಕತೆ ನಡೆಸಿ ಅದು ಯಶಸ್ವಿಯಾದರೆ, ಬಸ್​ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ