ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ₹50 ಲಕ್ಷ ನೀಡುವ ಸ್ಕೀಮ್‌ಗೆ ಕೊಕ್‌

Published : Nov 09, 2024, 11:43 AM IST
ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ₹50 ಲಕ್ಷ ನೀಡುವ ಸ್ಕೀಮ್‌ಗೆ ಕೊಕ್‌

ಸಾರಾಂಶ

ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರು.ವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ‘ಪ್ರೋತ್ಸಾಹಧನ ಯೋಜನೆ’ಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. 

ಬೆಂಗಳೂರು (ನ.09): ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರು.ವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ‘ಪ್ರೋತ್ಸಾಹಧನ ಯೋಜನೆ’ಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. 

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್‌ ಪರೀಕ್ಷೆಯ ರ್‍ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ರು. ಪ್ರೋತ್ಸಾಹಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರು. ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

ಮುಡಾ ಕೇಸ್‌ ಸಿಬಿಐಗೆ ವಹಿಸಿದ್ರೆ ಸಿಎಂ ಸಿದ್ದರಾಮಯ್ಯ ಜೈಲಿಗೆ: ಯಡಿಯೂರಪ್ಪ

ಮೆರಿಟ್‌ ಸೀಟು ಪಡೆದವರಿಗೆಸಿಗೋದು 2 ಲಕ್ಷ ರು.!: ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸ್ಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈಲಲ್ಲಿ ಬ್ಯಾಗ್‌ ಮರೆವವರ ನೆರವಿಗೆ 'ಆಪರೇಷನ್‌ ಅಮಾನತ್‌': 2.25 ಕೋಟಿ ಮೌಲ್ಯದ ವಸ್ತುಗಳನ್ನು ರಕ್ಷಿಸಿದ ಆರ್‌ಪಿಎಫ್‌
Bengaluru 2ನೇ ಏರ್‌ಫೋರ್ಟ್‌ಗೆ ಡಿಎಫ್‌ಆರ್‌ ಸಿದ್ಧತೆಗೆ ಟೆಂಡರ್‌: ವನ್ಯಜೀವಿ ಪರಿಣಾಮಕ್ಕೂ ಅಧ್ಯಯನ