ಸಿಎ ಸೈಟ್‌ 5 ವರ್ಷದಲ್ಲಿ ಸ್ವಾಧೀನವಾಗದಿದ್ದರೆ ಮೀಸಲು ರದ್ದು: ಹೈಕೋರ್ಟ್ ಆದೇಶ, ಏನಿದು ಪ್ರಕರಣ?

Published : Jan 04, 2024, 07:20 AM ISTUpdated : Jan 04, 2024, 07:45 AM IST
ಸಿಎ ಸೈಟ್‌ 5 ವರ್ಷದಲ್ಲಿ  ಸ್ವಾಧೀನವಾಗದಿದ್ದರೆ ಮೀಸಲು ರದ್ದು: ಹೈಕೋರ್ಟ್ ಆದೇಶ, ಏನಿದು ಪ್ರಕರಣ?

ಸಾರಾಂಶ

ಉದ್ಯಾನವನ, ಸ್ಮಶಾನ ಹಾಗೂ ಆಟದ ಮೈದಾನ ಸೇರಿದಂತೆ ಸಾರ್ವಜನಿಕ ಬಳಕೆಗೆ ಮೀಸಲಿಟ್ಟ ಜಾಗವನ್ನು ಐದು ವರ್ಷದಲ್ಲಿ ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಗಳು ಸ್ವಾಧೀನಪಡಿಸಿಕೊಳ್ಳದಿದ್ದರೆ ಅಂತಹ ಮೀಸಲಾತಿ ರದ್ದಾಗಲಿದೆ ಎಂದು ಹೈಕೋರ್ಟ್‌ ಆದೇಶಿಸಿದೆ.

ಬೆಂಗಳೂರು (ಜ.4) : ಉದ್ಯಾನವನ, ಸ್ಮಶಾನ ಹಾಗೂ ಆಟದ ಮೈದಾನ ಸೇರಿದಂತೆ ಸಾರ್ವಜನಿಕ ಬಳಕೆಗೆ ಮೀಸಲಿಟ್ಟ ಜಾಗವನ್ನು ಐದು ವರ್ಷದಲ್ಲಿ ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಗಳು ಸ್ವಾಧೀನಪಡಿಸಿಕೊಳ್ಳದಿದ್ದರೆ ಅಂತಹ ಮೀಸಲಾತಿ ರದ್ದಾಗಲಿದೆ ಎಂದು ಹೈಕೋರ್ಟ್‌ ಆದೇಶಿಸಿದೆ.

ಬೆಂಗಳೂರಿನ ಜಯಮಹಲ್ ಮುಖ್ಯ ರಸ್ತೆಯಲ್ಲಿರುವ ಜಯಮಹಲ್ ಪ್ಯಾಲೇಸ್ ಹೋಟೆಲ್ ಮಾಲೀಕ ಎಚ್.ಎಚ್. ಜೋತೇಂದ್ರ ಸಿನ್ಹಾಜಿ ಮತ್ತು ಅವರ ಉತ್ತರಾಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ಪೀಠ ಈ ಆದೇಶ ಮಾಡಿದೆ.

ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

ಅರ್ಜಿದಾರರ ಭೂಮಿಯನ್ನು ಪರಿಷ್ಕೃತ ಕ್ರಿಯಾ ಯೋಜನೆಯಡಿ 2007ರ ಜೂ.25ರಂದು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆದೇಶ ಹೊರಡಿಸಿತ್ತು. ಆ ಅವಧಿ 2012ರ ಜೂ.24ಕ್ಕೆ ಕೊನೆಗೊಂಡಿದೆ. ಆ ಭೂಮಿಯನ್ನು ಐದು ವರ್ಷದಲ್ಲಿ ಬಿಡಿಎ ಸ್ವಾಧೀನ ಪಡಿಸಿಕೊಂಡಿಲ್ಲ. ಇದರಿಂದ ಸಾರ್ವಜನಿಕ ಬಳಕೆಗೆ ಮೀಸಲಿಟ್ಟಿರುವುದು ಕರ್ನಾಟಕ ನಗರ ಮತ್ತು ಪಟ್ಟಣ ಯೋಜನೆ ಸೆಕ್ಷನ್ 12(1)(ಸಿ) ಅನ್ವಯ ರದ್ದಾಗಲಿದೆ. ಹಾಗಾಗಿ, ಭೂ ಮಾಲೀಕರು ತಮ್ಮ ಭೂಮಿಯನ್ನು ಮರು ನಿಯೋಜಿಸಲು (ರಿ-ಡೆಸಿಗ್ನೇಟ್) ಮಾಡಲು ಅರ್ಜಿ ಸಲ್ಲಿಸಬಹುದು ಎಂದು ಆದೇಶಿಸಿದೆ.

ಅಲ್ಲದೆ, ನ್ಯಾಯಾಲಯಕ್ಕೆ ಅರ್ಜಿದಾರರ ಭೂಮಿಯ ಸುತ್ತಲಿನ ಪ್ರದೇಶಗಳ ಅಭಿವೃದ್ಧಿ ಆಧರಿಸಿ ತಮ್ಮ ಭೂಮಿ ಮರು ನಿಯೋಜಿಸುವ ಬಗ್ಗೆ ಬಿಡಿಎ ಹೊಸದಾಗಿ ಅರ್ಜಿ ಸಲ್ಲಿಸಬಹುದು. ಅದನ್ನು 180 ದಿನಗಳಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪರಿಷ್ಕೃತ ಮಾಸ್ಟರ್‌ ಯೋಜನೆಯಲ್ಲಿ (ಆರ್‌ಎಂಪಿ) ಈಗಾಗಲೇ ಆಗಿರುವ ಅಭಿವೃದ್ಧಿಗಳು ಮತ್ತು ಉದ್ದೇಶಿಸಿರುವ ಅಭಿವೃದ್ಧಿ ಯೋಜನೆ ಎರಡೂ ಸಹ ಒಳಗೊಂಡಿರಬೇಕು. ಈಗಾಗಲೇ ಆಗಿರುವ ಅಭಿವೃದ್ಧಿಗಳನ್ನು ಬದಲಾಯಿಸಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಪ್ರಕರಣದ ವಿವರ

ಅರ್ಜಿದಾರರ ಭೂಮಿ ಹಾಗೂ ಜಯಮಹಲ್ ಪ್ಯಾಲೇಸ್ ಪ್ರದೇಶವನ್ನು 1995ರಲ್ಲಿ ಅನುಮೋದನೆಗೊಂಡ ಸಮಗ್ರ ಅಭಿವೃದ್ಧ ಯೋಜನೆ (ಸಿಡಿಪಿ) 2011ರ ಅಡಿಯಲ್ಲಿ ವಸತಿ ಪ್ರದೇಶವೆಂದು ಘೋಷಿಸಲಾಗಿತ್ತು. ಆದರೆ, 2007ರಲ್ಲಿ ಅನುಮೋದಿತ ಪರಿಷ್ಕೃತ ಮಾಸ್ಟರ್ ಪ್ಲಾನ್-2015ರ ಅಡಿಯಲ್ಲಿ ಆ ಜಾಗವನ್ನು ಉದ್ಯಾನವನ ಮತ್ತು ಹಸಿರುಜಾಗ/ಕ್ರೀಡಾ ಉದ್ದೇಶ ಆಟದ ಮೈದಾನ, ಸ್ಮಶಾನ ಎಂದು ಮೀಸಲಿಡಲಾಗಿತ್ತು. 

ಗುತ್ತಿಗೆ ನೌಕರರಿಗೂ ಗ್ರ್ಯಾಚ್ಯುಟಿ ಅನ್ವಯ; ಹೈಕೋರ್ಟ್ ಮಹತ್ವದ ಆದೇಶ!

ಅದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅರ್ಜಿದಾರರು, ತಮ್ಮ ಜಾಗದಲ್ಲಿ ಈ ಮೊದಲೇ ಹೋಟೆಲ್‌ ಇತ್ತು. ಅದು ವಾಣಿಜ್ಯ ಉದ್ದೇಶದ ಕಟ್ಟಡ. ಆ ವಿಚಾರ ಬಿಡಿಎಗೂ ತಿಳಿದಿದೆ. ಆದರೆ, ಪರಿಷ್ಕೃತ ಮಾಸ್ಟರ್ ಪ್ಲಾನ್ ನಲ್ಲಿ ಆ ಜಾಗವನ್ನು ಪಾರ್ಕ್ ಮತ್ತು ಮುಕ್ತ ಪ್ರದೇಶವೆಂದು ಘೋಷಿಸಿದೆ. ಬಿಡಿಎ ಆ ಜಾಗವನ್ನು ಸ್ವಾಧೀನಪಡಿಸಿಕೊಂಡಿರಲಿಲ್ಲ. ಹಾಗಾಗಿ ಆ ಮೀಸಲಿಟಿದ್ದ ಜಾಗದ ಅವಧಿ ಕೊನೆಗೊಂಡಿದ್ದು, ಸಹಜವಾಗಿಯೇ ಕರ್ನಾಟಕ ನಗರ ಮತ್ತು ಪಟ್ಟಣ ಯೋಜನೆ ಅನ್ವಯ ಮೀಸಲು ಆದೇಶ ರದ್ದಾಗಲಿದೆ ಎಂದು ವಾದಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ