ಪೆಟ್ರೋಲ್ ಪಂಪ್ ಬಳಿಯೇ ಕಾರು ಧಗ ಧಗ!: ತಪ್ಪಿದ ಭಾರೀ ದುರಂತ!

Published : Dec 17, 2018, 05:21 PM IST
ಪೆಟ್ರೋಲ್ ಪಂಪ್ ಬಳಿಯೇ ಕಾರು ಧಗ ಧಗ!: ತಪ್ಪಿದ ಭಾರೀ ದುರಂತ!

ಸಾರಾಂಶ

ಪೆಟ್ರೋಲ್ ಬಂಕ್ ಬಳಿಯೇ ಕಾರೊಂದು ಹೊತ್ತಿ ಉರಿದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ[ಡಿ.17]: ಪೆಟ್ರೋಲ್ ಬಂಕ್‌ವೊಂದರ ಸಮೀಪವೇ ಕಾರೊಂದು ಹೊತ್ತಿ ಉರಿದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ ಘಟನೆ ದಾವಣಗೆರೆಯ ಅಂಬೇಡ್ಕರ್ ಸರ್ಕಲ್ ಬಳಿ ನಡೆದಿದೆ.

ಮಹಮ್ಮದ್ ಸರ್ಮದ್ ಎಂಬವರಿಗೆ ಸೇರಿದ್ದ ಕಾರು ಇದಾಗಿದ್ದು, ಕಾರಿನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದರೆನ್ನಲಾಗಿದೆ. ಆದರೆ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಹೊರ ಬಂದು ರೋಗಿಯನ್ನು ಬೇರೆ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇತ್ತ ಕಾರು ಮಾಲೀಕ ಸರ್ಮದ್, ಸ್ಥಳೀಯರ ಜೊತೆಗೂಡಿ ಬೆಂಕಿ ನಂದಿಸಲು ಯತ್ನಿಸದರಾದರೂ ಯಾವುದೇ ಪ್ರಯೋಜನವಾಗಿಲ್ಲ.

ಈ ವೇಳೆ ಕೆಲವರು ಅಗ್ನಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪೆಟ್ರೋಲ್ ಪಂಪ್ ಬಳಿಯೇ ಈ ಘಟನೆ ಸಂಭವಿಸಿರುವುದರಿಂದ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!