ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೆ ಸಂಕಷ್ಟ?

Published : Nov 28, 2024, 06:32 AM IST
ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೆ ಸಂಕಷ್ಟ?

ಸಾರಾಂಶ

ಪಾರ್ವತಿ ಅವರಿಗೆ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಉಡುಗೊರೆ ರೂಪದಲ್ಲಿ ನೀಡಿದ್ದ ಕೆಸರೆ ಗ್ರಾಮದ ಜಮೀನು ಮೂಲ ಮಾಲೀಕರ ಕುಟುಂಬದ ಸದಸ್ಯರು, ಆ ಜಮೀನನ್ನು ತಮ್ಮ ಗಮನಕ್ಕೆ ತಾರದೇ ಅಕ್ರಮವಾಗಿ ಮಾರಾಟ ಮಾಡಿ ವಂಚಿಸಲಾಗಿದೆ ಎಂದು ಆರೋಪಿಸಿ ಈ ದೂರು ದಾಖಲಾಗಿದೆ. 

ಮೈಸೂರು(ನ.28): ಮುಡಾ ಹಗರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ. ತನಿಖೆ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಹಾಗೂ ಜಮೀನು ಮಾರಿದ ದೇವರಾಜು ಅವರಿಗೆ ಮತ್ತೊಂದು ಕಂಟಕ ಎದುರಾ ಗಿದೆ. ಸಿಎಂ ವಿರುದ್ಧ ಸುತ್ತಿಕೊಂಡಿರುವ ಪ್ರಕರಣದ ಮೂಲವಾದ ಕೆಸರೆ ಗ್ರಾಮದ ವಿವಾದಿತ ಜಮೀನು ಸಂಬಂಧ ಸಿಎಂ ಪತ್ನಿ ಪಾರ್ವತಿ ಸೇರಿ 12 ಜನರ ವಿರುದ್ಧ ಮೈಸೂ ರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ವಕ್ಸ್ ಸೆಷನ್ಸ್ ಕೋರ್ಟ್‌ಲ್ಲಿ ಕೇಸು ದಾಖಲಾಗಿದೆ. 

ಪಾರ್ವತಿ ಅವರಿಗೆ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಉಡುಗೊರೆ ರೂಪದಲ್ಲಿ ನೀಡಿದ್ದ ಕೆಸರೆ ಗ್ರಾಮದ ಜಮೀನು ಮೂಲ ಮಾಲೀಕರ ಕುಟುಂಬದ ಸದಸ್ಯರು, ಆ ಜಮೀನನ್ನು ತಮ್ಮ ಗಮನಕ್ಕೆ ತಾರದೇ ಅಕ್ರಮವಾಗಿ ಮಾರಾಟ ಮಾಡಿ ವಂಚಿಸಲಾಗಿದೆ ಎಂದು ಆರೋಪಿಸಿ ಈ ದೂರು ದಾಖಲಾಗಿದೆ. 

ಲೋಕಾಯುಕ್ತ ತನಿಖೆಯಲ್ಲಿ ಹಸಕ್ಷೇಪ ಮಾಡಿಲ್ಲ, ನಾನು ಯಾವ ತಪ್ಪು ಮಾಡಿಲ್ಲ, ಯಾರಿಗೂ ಹೆದರಲ್ಲ: ಬೈರತಿ ಸುರೇಶ್

ಮಲ್ಲಿಕಾರ್ಜುನ ಸ್ವಾಮಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಅಣ್ಣ ಮೈಲಾರಯ್ಯ ಅವರ ಪುತ್ರಿ ಜಮುನಾ ಕೋರ್ಟ್ ಮೆಟ್ಟಿಲೇರಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ನ್ಯಾಯಾಧೀಶರು ವಿಚಾರಣೆಯನ್ನು ಜ.10ಕ್ಕೆ ನಿಗದಿಪ ಞಡಿಸಿದ್ದಾರೆ. 

ಮೈಲಾರಯ್ಯ ಅವರ ಪುತ್ರಿ ಜಮುನಾ ಅವರು ಜಮೀನು ಮೂಲ ಮಾಲೀಕರಾದ ನಿಂಗ ಅವರ ಮೊಮ್ಮಗಳಾಗಿದ್ದು, ನಿಂಗ ಅವರಿಗೆ ದೇವರಾಜು, ಮೈಲಾರಯ್ಯ ಮತ್ತು ಮಲ್ಲಯ್ಯ ಎಂಬ ಮೂವರು ಪುತ್ರರು ಇದ್ದಾರೆ. ವಿವಾದಿತ ಕೆಸರೆಯಲ್ಲಿನ ಸರ್ವೆ ನಂ.464ರ 3.16 ಎಕರೆ ಜಮೀನು ಪಿತ್ರಾರ್ಜಿತ ಆಸ್ತಿ. ನಮ್ಮ ದೊಡ್ಡಪ್ಪ ದೇವರಾಜು ಅವರು ನಮ್ಮ ಗಮನಕ್ಕೆ ತಾರದೇ ಆ ಜಮೀನು ಮಾರಾಟ ಮಾಡಿದ್ದು, ವಂಚಿಸಲಾಗಿದೆ ಎಂದು ಜಮುನಾ ಅವರು ಆರೋಪಿಸಿ ಪಾರ್ವತಿ ಸಿದ್ದರಾಮಯ್ಯ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾರಾಟ ಮಾಡಿದ್ದ ಜೆ.ದೇವರಾಜು, ಎಂ. ಮಂಜುನಾಥ ಸ್ವಾಮಿ, ಎಂ.ಸರೋಜಮ್ಮ, ಡಿ. ಶೋಭಾ, ಡಿ. ದಿನಕರ್‌ರಾಜ್, ಡಿ.ಪ್ರಭಾ, ಡಿ.ಪ್ರತಿಭಾ, ಡಿ.ಶಶಿಧರ್‌ಸೇರಿ ಜಿಲ್ಲಾಧಿಕಾರಿ ಮತ್ತು ಎಂಡಿಎ ಆಯುಕ್ತರನ್ನು ಎದುರು ಪಾರ್ಟಿದಾರರು ಎಂದು ಉಲ್ಲೇಖಿಸಿ ನ್ಯಾಯಾ ಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. 

ಪಾರ್ವತಿ ಅವರಿಗೆ ಸೋದರನಿಂದ ಉಡುಗೊರೆಯಾಗಿ ಬಂದಿದ್ದ ಜಮೀನನ್ನು ಮುಡಾ ಭೂಸ್ವಾಧೀನ ಪಡಿಸಿಕೊಂಡು ಪರ್ಯಾಯವಾಗಿ ವಿಜಯನಗರದಲ್ಲಿ 14 ನಿವೇಶನ ಕೂಡ ನೀಡಿತ್ತು. ವಿವಾದವಾದ ಬಳಿಕ ಪಾರ್ವತಿ ಅವರು ಮುಡಾಗೆ ಆ 14 ನಿವೇಶನವನ್ನು ಹಿಂದಿರುಗಿಸಿದ್ದಾರೆ. 

ಮುಡಾ ಹಗರಣ: ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ, ಬಿಜೆಪಿ ಶಾಸಕ ಶ್ರೀವತ್ಸ

ಪರಿಹಾರ ಕೊಡಿಸಿಲ್ಲ: 

ಪ್ರಕರಣ ಕುರಿತು ಮಾತನಾಡಿರುವ ಜಮುನಾ ಸಹೋದರ ಮಂಜುನಾಥಸ್ವಾಮಿ ಅವರು, ನಮ್ಮ ಚಿಕ್ಕಪ್ಪ ದೇವರಾಜು ಮೋಸದಿಂದ ಭೂಮಿ ಮಾರಾಟ ಮಾಡಿದ್ದಾರೆ. ಖಾತೆ ಮಾಡಿಸುತ್ತೇನೆಂದು ಹೇಳಿ ನನ್ನ ಹಾಗೂ ತಾಯಿ ಬಳಿ ಸಹಿ ಪಡೆದುಕೊಂಡರು. ಆದರೆ ಭೂಮಿ ಮಾರಾಟ ಮಾಡಲಾಗಿದ್ದು, ಕೇಳಿದಕ್ಕೆ ನಿಮಗೆ ಪರಿಹಾರ ಕೊಡಿಸುತ್ತೇನೆ ಎಂದರು. 

ಆದರೆ ಈವರೆಗೆ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದು ದೂರಿದರು. ವಿವಾದಿತ 3.16 ಎಕರೆ ಭೂಮಿ ನನ್ನ ತಂದೆ ಮೈಲಾರಯ್ಯ ಪಾಲಿಗೆ ಬಂದಿತ್ತು. ಆ ಭೂಮಿಯನ್ನು ದೇವರಾಜು ಮೋಸದಿಂದ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಸಹೋದರಿ ಜಮುನಾ ಹೆಸರಿನಲ್ಲಿ ದಾವೆ ಹಾಕಿಸಿದ್ದೇವೆ. ನಮಗೆ ಸಿದ್ದರಾಮಯ್ಯ ಸಂಬಂಧ ಇಲ್ಲ. ಅವರನ್ನು ಕೇಳಿದರೆ ನೀವು ಯಾರು ಎಂದು ಕೇಳಬಹುದು? ಅದಕ್ಕಾಗಿ ದೇವರಾಜು ಅವರನ್ನು ಕೇಳಿದ್ದೇವೆ? ಪರಿಹಾರ ಸಿಗದ ಹಿನ್ನೆಲೆಯಲ್ಲಿ ಭೂಮಿ ಮಾರಾಟ ಮಾಡಿದವರು, ಕೊಂಡವರು ಎಲ್ಲರನ್ನೂ ಸೇರಿಸಿ ದಾವೆ ಹಾಕಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!