'ಆ ರನ್ಯನ್‌ ಜೋಡಿ ಯಾರ್‌ ಯಾರ್‌ ಸಂಬಂಧ ಅದವೋ..' ಅಶ್ಲೀಲ ಪದ ಬಳಕೆ, ಯತ್ನಾಳ್ ವಿರುದ್ಧ FIR!

Published : Mar 19, 2025, 04:49 AM ISTUpdated : Mar 19, 2025, 10:04 AM IST
'ಆ ರನ್ಯನ್‌ ಜೋಡಿ ಯಾರ್‌ ಯಾರ್‌ ಸಂಬಂಧ ಅದವೋ..' ಅಶ್ಲೀಲ ಪದ ಬಳಕೆ,  ಯತ್ನಾಳ್ ವಿರುದ್ಧ FIR!

ಸಾರಾಂಶ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಕೆ ಮಾಡಿದ ಆರೋಪದಡಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಡಾ.ಅಕುಲಾ ಅನುರಾಧಾ ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು ಮಾ.19):ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್‌ ಕುರಿತು ಅಸಭ್ಯ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಹ್ರೈಗೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ.ಅಕುಲಾ ಅನುರಾಧಾ ಎಂಬುವವರು ನೀಡಿದ ದೂರಿನ ಮೇರೆಗೆ ಶಾಸಕ ಯತ್ನಾಳ್‌ ವಿರುದ್ಧ ಬಿಎನ್‌ಎಸ್‌ ಕಲಂ 79 ಅಡಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರಿನಲ್ಲಿ ಏನಿದೆ?:

ಶಾಸಕ ಯತ್ನಾಳ್‌ ಮಾ.17ರಂದು ‘ಆ ರನ್ಯನ್‌ ಜೋಡಿ ಯಾರ್‌ ಯಾರ್‌ ಸಂಬಂಧ ಅದವೋ, ಆಕೆಗೆ ಏನೇನ್‌ ಸೆಕ್ಯುರಿಟಿ ಕೊಟ್ಟಾರೋ ಎಲ್ಲಾ ಮಾಹಿತಿ ತೆಗೆದುಕೊಂಡಿವಿ. ಗೋಲ್ಡ್‌ ಎಲ್ಲಿಂದ ತಂದ್ರು, ಎಲ್ಲವೂ ಹೇಳ್ತೀವಿ. ಮೈ ತುಂಬಾ ಆಕೆ ಬಂಗಾರ ಇಡ್ಕೊಂಡು ಬಂದಾಳಾ’ ಇತ್ಯಾದಿಯಾಗಿ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಮಾಜದಲ್ಲಿ ಗೌರವದ ಸ್ಥಾನದಲ್ಲಿ ಇರುವ ಬಸನಗೌಡ ಯತ್ನಾಳ್‌ ಅವರು ಬೇಜವಾಬ್ದಾರಿತನದಿಂದ ಹರ್ಷವರ್ಧಿನಿ ರನ್ಯಾ ರಾವ್‌ ಕುರಿತು ಅಸಭ್ಯ ಹಾಗೂ ಅಶ್ಲೀಲವಾಗಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ರನ್ಯಾ ರಾವ್‌ ಅವರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ರನ್ಯಾಗೆ ಸಚಿವರ ಸಹಾಯ! ಹೆಸರು ಹೇಳ್ತಾರಾ ಯತ್ನಾಳ್

ರನ್ಯಾ ರಾವ್‌ ಅವರು ಕನ್ನಡ, ತಮಿಳು, ತೆಲುಗು ಭಾಷೆ ಚಲನಚಿತ್ರಗಳಲ್ಲಿ ನಟಿಯಾಗಿದ್ದು, ಸಮಾಜದಲ್ಲಿ ಒಳ್ಳೆಯ ಗೌರವ ಹೊಂದಿದ್ದಾರೆ. ಅಂತವರ ಗೌರವಕ್ಕೆ ಚ್ಯುತಿ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿ ಯತ್ನಾಳ್‌ ಸಾರ್ವಜನಿಕವಾಗಿ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಕುಲಾ ಅನುರಾಧ ದೂರಿನಲ್ಲಿ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌