ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ

Kannadaprabha News   | Kannada Prabha
Published : Nov 02, 2025, 06:05 AM IST
CM Siddaramaiah

ಸಾರಾಂಶ

ಕನ್ನಡಪರ ಹೋರಾಟಗಾರರ ಮೇಲೆ ಹೂಡಲಾಗಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಾಜ್ಯೋತ್ಸವ ಸಮಿತಿಯಿಂದ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರು : ಕನ್ನಡಪರ ಹೋರಾಟಗಾರರ ಮೇಲೆ ಹೂಡಲಾಗಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಾಜ್ಯೋತ್ಸವ ಸಮಿತಿಯಿಂದ ಶನಿವಾರ ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡಪರ ಇರುವವರು, ಹೋರಾಟಗಾರರ ಪರವಾಗಿ ನಮ್ಮ ಸರ್ಕಾರ ಇರುತ್ತದೆ. ಕನ್ನಡಪರ ಹೋರಾಟಗಳನ್ನು ಮುಂದುವರೆಸಬೇಕು. ವಾಟಾಳ್ ನಾಗರಾಜ್ ಅವರು ತಮ್ಮ ಮೇಲೆ ಕೇಸ್‌ಗಳಿವೆ ವಾಪಸ್ ತೆಗೆದುಕೊಳ್ಳಿ ಎಂದಿದ್ದಾರೆ. ಅವುಗಳನ್ನು ವಾಪಸ್ ಪಡೆಯುತ್ತೇನೆ ಎಂದರು.

ಕನ್ನಡನಾಡಿನಲ್ಲಿ ಯಾರೇ ಆಗಲಿ ಜೀವನ ರೂಪಿಸಿಕೊಳ್ಳಬೇಕು ಎಂದರೆ ಕನ್ನಡವನ್ನು ಕಲಿಯಲೇ ಬೇಕಾದಂತಹ ಅನಿವಾರ್ಯ ವಾತಾವರಣ ಸೃಷ್ಟಿಸಬೇಕು. ನಿಮಗೆ ಯಾರಾದರೂ ಹಿಂದಿ, ತೆಲುಗು, ಮಲಯಾಳಂ, ತಮಿಳು ಭಾಷೆಯಲ್ಲಿ ಮಾತನಾಡಿಸಿದರೆ ಕನ್ನಡದಲ್ಲೇ ಉತ್ತರ ಕೊಡಬೇಕು. ಅನ್ಯ ರಾಜ್ಯಗಳಿಗೆ ತೆರಳಿದಾಗ ಅಲ್ಲಿನವರು ಅಲ್ಲಿನ ಭಾಷೆಯಲ್ಲೇ ಉತ್ತರ ನೀಡುತ್ತಾರೆ. ಅದೇ ಸ್ವಭಾವ ನಾವು ಬೆಳೆಸಿಕೊಳ್ಳಬೇಕು. ಆಗ, ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಮರಣೋತ್ತರ ಡಾಕ್ಟರೇಟ್ ನೀಡಲು ಸೂಚಿಸುತ್ತೇನೆ. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ನೀಡಿಲ್ಲ ಎಂಬುದನ್ನು ತಿಳಿದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸುತ್ತೇನೆ. ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡುತ್ತೇವೆ ಎಂದಿದ್ದರು. ಆದರೆ, ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ಮಹಾಜನ್‌ ವರದಿಯೇ ಅಂತಿಮ:

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಈ ಹಿಂದೆ ಎಂಇಎಸ್‌ನವರು ಬೆಳಗಾವಿಯಲ್ಲಿ 5 ಸೀಟು ಗೆಲ್ಲುತ್ತಿದ್ದರು. ಈಗ ಒಂದೂ ಇಲ್ಲ. ಅಷ್ಟರಮಟ್ಟಿಗೆ ಕನ್ನಡ ಹೋರಾಟ ಪ್ರಬಲವಾಗಿದೆ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಮಟ್ಟ ಹಾಕುತ್ತೇವೆ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಆರೋಗ್ಯ ಚೆನ್ನಾಗಿರುವವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಬೇಕು. ಅವರಿಂದ ರಾಜ್ಯದಲ್ಲಿ ಶಾಂತಿ, ಪ್ರೀತಿ ನೆಲೆಸುತ್ತದೆ. ಯಾರ ಒತ್ತಡಕ್ಕೂ ಮಣಿಯಬೇಕಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅಂಥ ಸಂದರ್ಭ ಬಂದರೆ ನೋಡಿಯೇ ಬಿಡೋಣ. ನಾವೆಲ್ಲರೂ ನಿಮ್ಮ ಜೊತೆ ಇರುತ್ತೇವೆ. ಕನ್ನಡ ಹೋರಾಟಗಾರರ ಮೇಲಿನ ವಾಪಸ್ ಪಡೆಯಬೇಕು. ನನ್ನ ಮೇಲೆ 46 ಕೇಸ್‌ಗಳಿವೆ. ಪೊಲೀಸರು ನಿತ್ಯ ಸಮನ್ಸ್ ಕೊಡುತ್ತಾರೆ ಎಂದರು.

ಕನ್ನಡಪರ ಹೋರಾಟಗಾರರಾದ ಪ್ರವೀಣ್ ಶೆಟ್ಟಿ, ಶಿವರಾಮೇಗೌಡ, ಗೋವಿಂದು ಸೇರಿ ಇನ್ನಿತರರು ಉಪಸ್ಥಿತರಿದ್ದರು.

ಬೆಳಗಾವಿ ಪುಂಡಾಟ ಮಟ್ಟ ಹಾಕುತ್ತೇವೆ

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಯಾರಾದರೂ ಪುಂಡಾಟಿಕೆ ಮಾಡಿದರೆ ಮಟ್ಟ ಹಾಕುತ್ತೇವೆ.

- ಸಿದ್ದರಾಮಯ್ಯ, ಮುಖ್ಯಮಂತ್ರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!