ಡಿಕೆಶಿ ಮುಚ್ಚಿಟ್ಟಿರುವ ಸತ್ಯ ಏನು? ಬಹಿರಂಗಪಡಿಸಲಿ: ಎಚ್‌ಡಿಕೆ ಸವಾಲು

Published : Sep 26, 2023, 03:54 AM IST
 ಡಿಕೆಶಿ ಮುಚ್ಚಿಟ್ಟಿರುವ ಸತ್ಯ ಏನು? ಬಹಿರಂಗಪಡಿಸಲಿ: ಎಚ್‌ಡಿಕೆ ಸವಾಲು

ಸಾರಾಂಶ

ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯ ಹೇಳಿದರೆ ಕರ್ನಾಟಕಕ್ಕೆ ಇನ್ನೂ ತೊಂದರೆಯಾಗಲಿದೆ ಎಂಬುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸತ್ಯ ಯಾಕೆ ಮುಚ್ಚಿಟ್ಟಿದ್ದಾರೆ? ಸತ್ಯಾಂಶ ಹೇಳದಿದ್ದರೆ, ಅವರಿಗೆ ಗೌರವ ಎಲ್ಲಿ ಉಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಸೆ.26) ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯ ಹೇಳಿದರೆ ಕರ್ನಾಟಕಕ್ಕೆ ಇನ್ನೂ ತೊಂದರೆಯಾಗಲಿದೆ ಎಂಬುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸತ್ಯ ಯಾಕೆ ಮುಚ್ಚಿಟ್ಟಿದ್ದಾರೆ? ಸತ್ಯಾಂಶ ಹೇಳದಿದ್ದರೆ, ಅವರಿಗೆ ಗೌರವ ಎಲ್ಲಿ ಉಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತ್ಯಾಂಶವನ್ನು ಮುಚ್ಚಿಟ್ಟರೆ ಸುಪ್ರೀಂಕೋರ್ಟ್‌ ಹೇಗೆ ಅವರ ಪರವಾಗಿ ತೀರ್ಪು ಕೊಡಲಿದೆ? ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದರು. ಇಬ್ಬರೂ ಹೋಗಿ ಏನು ಅರ್ಜಿ ಕೊಟ್ಟು ಬಂದರು ಎಂದು ಹೇಳಬೇಕಲ್ಲವೇ? ಸುಪ್ರೀಂಕೋರ್ಟ್ ಮುಂದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಯಾವ ವಾಸ್ತವಾಂಶವನ್ನು ಈ ಸರ್ಕಾರ ಇಟ್ಟಿದೆ ಎಂದು ಪ್ರಶ್ನಿಸಿದರು.

ಕಾವೇರಿ ಜಲವಿವಾದ: ಎರಡೂ ಬಂದ್‌ಗೆ ನಮ್ಮ ಬೆಂಬಲವಿಲ್ಲ- ಕರವೇ ನಾರಾಯಣಗೌಡ

ಕುಮಾರಸ್ವಾಮಿ ಅವರು ಅಮಿತ್ ಶಾ ಅವರ ಜತೆ ಮಾತಾಡಿಕೊಂಡು ಬಂದಿದ್ದಾರೆ. ಅಲ್ಲೇ ಕಾವೇರಿ ವಿಚಾರವಾಗಿ ಮಾತಾಡಬೇಕಿತ್ತು ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಅವರು ಮೊದಲೇ ಹೇಳಿದ್ದರೆ ಮಾತಾಡಿಕೊಂಡು ಬರುತ್ತಿದ್ದೆ ಎಂದು ಕಿಡಿಕಾರಿದರು.

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮಾಹಿತಿಗಳನ್ನು ಕೊಡುವುದರಲ್ಲಿ ಎಡವಿದೆ. ಅದನ್ನೆಲ್ಲ ಪ್ರಧಾನಿಗಳ ಗಮನಕ್ಕೆ ದೇವೇಗೌಡರು ತಂದಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ನಮ್ಮ ಅಧಿಕಾರಿಗಳು ಇಲ್ಲಿ ಕುಳಿತುಕೊಂಡು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗುತ್ತಾರೆ. ಆದರೆ ತಮಿಳುನಾಡಿನಿಂದ 15 ಜನ ನೇರವಾಗಿ ಬಂದು ಭಾಗಿಯಾಗುತ್ತಾರೆ. ನಮ್ಮ ಅಧಿಕಾರಿಗಳು ಒಂದು ಕಡೆ ಬ್ಯುಸಿಯಾದರೆ, ನಮ್ಮ ಆಡಳಿತಗಾರರು ಮತ್ತೊಂದೆಡೆ ಕಡೆ ಬ್ಯುಸಿಯಾಗಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರು ಬಂದ್: ಮಧ್ಯರಾತ್ರಿಯಿಂದಲೇ ನಗರದಲ್ಲಿ ಸೆಕ್ಷನ್ 144 ಜಾರಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ