ಸೋನಿಯಾ ಗಾಂಧಿ ತೃಪ್ತಿಪಡಿಸಲು ತಮಿಳನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರದ ವಿರುದ್ಧ ಆರ್‌ ಅಶೋಕ್ ಆಕ್ರೋಶ

Published : Sep 21, 2023, 03:05 PM IST
ಸೋನಿಯಾ ಗಾಂಧಿ ತೃಪ್ತಿಪಡಿಸಲು ತಮಿಳನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರದ ವಿರುದ್ಧ ಆರ್‌ ಅಶೋಕ್ ಆಕ್ರೋಶ

ಸಾರಾಂಶ

ರಾಜ್ಯ ಸರ್ಕಾರ ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸಲು ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ. ನಮ್ಮ ರೈತರಿಗೆ ಕೃಷಿಗೆ ಬಿಡಿ ಕುಡಿಯಲು ಸಹ ನೀರಿಲ್ಲ ಇಂಥ ಪರಿಸ್ಥಿತಿಯಲ್ಲಿ ತಮಿಳನಾಡಿನ ಬೆಳೆಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರ ನಾಡಿನ ರೈತರ ಹಿತಾಸಕ್ತಿ ಬಲಿಕೊಟ್ಟಿದೆ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು (ಸೆ.21): ರಾಜ್ಯ ಸರ್ಕಾರ ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸಲು ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿಲ್ಲಿ ಕಾವೇರಿ ಹೋರಾಟ ವಿಚಾರ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಚಿತಾವಣೆ ಮೇರೆಗೆ ಸಿಎಂ, ಡಿಸಿಎಂ ತಮಿಳನಾಡಿಗೆ ನೀರು ಬಿಟ್ಟಿದ್ದಾರೆ. ಆ ಮೂಲಕ ಮುಂಬರುವ ಚುನಾವಣೆಗೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ರೈತರಿಗೆ ಕೃಷಿಗೆ ಬಿಡಿ, ಕುಡಿಯಲೇ ನೀರು ಇಲ್ಲದಂತಾಗಿದೆ ಇಂಥ ಪರಿಸ್ಥಿತಿಯಲ್ಲಿ ತಮಿಳನಾಡು ಬೆಳೆಗೆ ನೀರು ಬಿಡುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆಗೆ ಇಳಿದಿದ್ದಾರೆ ಪರಿಸ್ಥಿತಿ ಕೈಮೀರಿ ಗಲಾಟೆಗಳು ನಡೆದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದರು.

ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದು ಬಿಜೆಪಿ ಸರ್ಕಾರದಲ್ಲಿ: ಆರ್‌ ಅಶೋಕ್ ತಿರುಗೇಟು

ಕಾವೇರಿ ವಿಚಾರವಾಗಿ ಸಮರ್ಥವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸ್ಟಾಲಿನ್ ವಿರುದ್ಧ ಒಂದೇ ಒಂದು ಮಾತನಾಡಿಲ್ಲ. ತಮಿಳನಾಡಿನವರು ದೆಹಲಿಗೆ ಹೋದಾಗ ಇವರು ಇಲ್ಲೇ ಗೂಟ ಹೊಡೆದುಕೊಂಡು ಕೂತಿದ್ರು ಈಗ ಬೂಟಾಟಿಕೆಗೆ ದೆಹಲಿಗೆ ಹೋಗಿದ್ದಾರೆ. ರೈಲು ಹೋದಮೇಲೆ ಟಿಕೆಟ್ ತಗೊಂಡ್ರೆ ರೈಲು ಸಿಗುತ್ತಾ ಎಂದು ರಾಜ್ಯ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ರೈತಸಂಘ, ಕನ್ನಡ ಸಂಘಟನೆಗಳು ಪ್ರತಿಭಟನೆಯ ಕಿಡಿ ಹೊತ್ತಿಸಿದ್ದು ರಾಜ್ಯ ಸರ್ಕಾರದ ವಿರುದ್ಧ ಯಾವ ಭುಗಿಲೇಳುವುದೋ ಇದೀಗ ಆರ್‌ ಅಶೋಕ್ ಕೂಡ ರಾಜ್ಯ ಸರ್ಕಾರದ ವಿರುದ್ಧ ಕಿಚ್ಚು ಹೆಚ್ಚಿಸುವ ಮಾತನಾಡಿದ್ದಾರೆ. ಇತ್ತ ರಾಜ್ಯ ಸರ್ಕಾರ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಾ ತಮಿಳನಾಡಿಗೆ ನೀರು ಬಿಡುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.

ಇವತ್ತಿಗೆ ಚುನಾವಣೆ ನಡೆದರೂ ಸಿದ್ದರಾಮಯ್ಯಗೆ ಜನ ವೋಟ್ ಹಾಕಲ್ಲ: ಆರ್.ಅಶೋಕ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಲಬುರಗಿ: 8 ದಿನದ ಕರುವನ್ನು ತೊಟ್ಟಿಲಲ್ಲಿ ಮಲಗಿಸಿ ಅದ್ದೂರಿ ನಾಮಕರಣ: ಗೋ ಸೇವಕರಿಗೆ ಸನ್ಮಾನ
ಆಹಾರ ಅರಸಿ ಬಂದ ಕರಡಿ ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣ ಸಾವು