ಕರ್ನಾಟಕಕ್ಕೆ ಮತ್ತೆ ಅನ್ಯಾಯ, ತಮಿಳುನಾಡಿಗೆ 2700 ಕ್ಯೂಸೆಕ್ ನೀರು ಬಿಡಲು ಆದೇಶ

Published : Nov 23, 2023, 01:11 PM ISTUpdated : Nov 23, 2023, 01:13 PM IST
ಕರ್ನಾಟಕಕ್ಕೆ ಮತ್ತೆ ಅನ್ಯಾಯ, ತಮಿಳುನಾಡಿಗೆ  2700 ಕ್ಯೂಸೆಕ್ ನೀರು ಬಿಡಲು ಆದೇಶ

ಸಾರಾಂಶ

ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ.

ನವದೆಹಲಿ (ನ.23): ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ. ಡಿಸೆಂಬರ್ ಅಂತ್ಯದವರೆಗೂ ನೀರು ಬಿಡಲು ಹೇಳಿದ್ದು. ಬಾಕಿ ಇರುವ 7.5ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಂತೆ  ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಗುರುವಾರ ಬೆಳಗ್ಗೆ 11.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುವಂತೆ ಕರ್ನಾಟಕಕ್ಕೆ ಶಿಫಾರಸ್ಸು ಮಾಡಲಾಗಿದೆ. ಸಭೆಯಲ್ಲಿ ಹಳೇ ಬಾಕಿ ನೀರು ಬಿಡಲು ತಮಿಳುನಾಡು ಆಗ್ರಹಿಸಿತು. ಹಳೇ ಬಾಕಿ 11 tmc  ನೀರು ಬಿಡಲು ಬಾಕಿ ಇದೆ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.

ರಾಜ್ಯದಲ್ಲಿ ಬರಗಾಲ, ಕಾವೇರಿ ಸಮಸ್ಯೆಯ ಬಗ್ಗೆ ಗಮನ ಹರಿಸುವುದು ಸೂಕ್ತ: ಸಚಿವ ಚಲುವರಾಯಸ್ವಾಮಿ

ಸದ್ಯ ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅದನ್ನು ಶೇಖರಣೆ ಮಾಡುವ ಬಗ್ಗೆ ತಮಿಳುನಾಡು ಸರಕಾರ ಯಾವುದೇ ಚಿಂತನೆ ನಡೆಸುತ್ತಿಲ್ಲ. ತಮಿಳುನಾಡಿನಲ್ಲಿ ಮಳೆ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅನಿಯಂತ್ರಿತ ನೀರು ನದಿ ಪಾತ್ರ ಸೇರುತ್ತಿದೆ.  3000 ಸಾವಿರ ಕ್ಯೂಸೆಕ್ ಅನಿಯಂತ್ರಿತ ನೀರು ಯಾವುದೇ ಅಡೆತಡೆ ಇಲ್ಲದೇ ತಮಿಳುನಾಡು ಸೇರುತ್ತಿದೆ. ತಮಿಳುನಾಡಿನಲ್ಲಿ ಮಳೆ ಹೆಚ್ಚಾದ್ರೆ ಪುನಃ ನೀರು ಕರ್ನಾಟಕ ಪಡೆಯಲು ಸಾಧ್ಯ ಇಲ್ಲ. ಅಲ್ಲದೇ ಮೆಟ್ಟೂರು ಜಲಾಶಯದಿಂದ ತಮಿಳುನಾಡು ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಬಿಡುತ್ತಿದೆ. ಹಾಗಾಗಿ ಕರ್ನಾಟಕ ದಿಂದ ಪುನಃ ನೀರು ಬಿಡಲು ಸಾಧ್ಯ ಇಲ್ಲ ಎಂಬುದು ಕರ್ನಾಟಕದ ವಾದವಾಗಿದೆ.

ಕರ್ನಾಟಕಕ್ಕೆ ಮತ್ತೊಮ್ಮೆ ಕಾವೇರಿ ಸಂಕಷ್ಟ, ನ.23ರವರೆಗೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದೆ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಸೂಚನೆಯಂತೆ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಮಧ್ಯೆ, ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ, ಕರ್ನಾಟಕದಿಂದ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಲು ರಾಜ್ಯದ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ಮಧ್ಯೆ, ಎಂದಿನಂತೆ ತಮಿಳುನಾಡು, ಬಾಕಿ ನೀರು ಬಿಡುಗಡೆಗೆ ಆದೇಶ ನೀಡುವಂತೆ ಕೋರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

RCB ಪಂದ್ಯಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ 200 ಸಿಸಿಟಿವಿ ಆಫ್ ಮಾಡಿದ್ದ ಇಬ್ಬರು ಅರೆಸ್ಟ್ ! ಉದ್ದೇಶ ಏನಿತ್ತು?
Karnataka News Live: ರಾಷ್ಟ್ರೀಯ ಹೆದ್ದಾರಿಗೆ ಬಂದ ಸಾಂಬಾರ್ ಜಗಳ; ಸೋದರಮಾವನಿಂದ ಹಲ್ಲೆಗೆ ಯತ್ನ, ಪೊಲೀಸರ ವಶಕ್ಕೆ