ತಮಿಳನಾಡಿಗೆ ಮತ್ತೆ ನೀರು ಬಿಡಲು ಆದೇಶ; ನಮ್ಮಲ್ಲಿ ನೀರಿಲ್ಲ ದೇವರೇ ಕಾಪಾಡಬೇಕು: ಡಿಕೆಶಿ

Published : Oct 31, 2023, 05:20 AM IST
ತಮಿಳನಾಡಿಗೆ ಮತ್ತೆ ನೀರು ಬಿಡಲು ಆದೇಶ; ನಮ್ಮಲ್ಲಿ ನೀರಿಲ್ಲ ದೇವರೇ ಕಾಪಾಡಬೇಕು: ಡಿಕೆಶಿ

ಸಾರಾಂಶ

‘ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಅ.31) :  ‘ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಆರ್‌ಸಿ) ಮಾಡಿರುವ ಶಿಫಾರಸಿನ ಕುರಿತು ಅಸಹಾಯಕತೆ ವ್ಯಕ್ತಪಡಿಸಿದರು.

ತಮಿಳುನಾಡಿಗೆ ಮತ್ತೆ ನಿತ್ಯ 2600 ಕ್ಯು ನೀರು ಬಿಡಲು ಆದೇಶ; ಕಾವೇರಿ ನದಿಗೆ ಇಳಿದು ರೈತ ಮುಖಂಡರು ಪ್ರತಿಭಟನೆ

‘ಕೆಆರ್‌ಎಸ್‌ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್‌ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯುಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಹೀಗಾಗಿ ಕುಡಿಯುವ ನೀರನ್ನು ನಾವು ರಕ್ಷಿಸಿಕೊಳ್ಳಬೇಕು. ತಮಿಳುನಾಡಿಗೆ ನೀರು ಬಿಡುವ ಶಕ್ತಿ ನಮ್ಮಲ್ಲಿ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಇನ್ನೇನಿದ್ದರೂ ದೇವರ ಮೊರೆ ಹೋಗೋಣ. ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ ಎಂದರು.

ನಾನು ಹೋರಾಟ ಶುರು ಮಾಡಿದಾಗ ನೀವು ಯಾರೂ ಹುಟ್ಟೇ ಇರಲಿಲ್ಲ: ಕಮಿಷನರ್ ವಿರುದ್ಧ ವಾಟಾಳ್ ಗರಂ!

ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನ.1 ರಿಂದ ಮುಂದಿನ 15 ದಿನಗಳ ಕಾಲ ನಿತ್ಯ 2,600 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!