ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

Published : Jun 11, 2020, 09:32 PM IST
ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

ಸಾರಾಂಶ

ಕೆಆರ್​ಎಸ್​ ಅಣೆಕಟ್ಟಿನಿಂದ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದೆ.

ಚೆನ್ನೈ, (ಜೂನ್.11): ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಇಂದು (ಗುರುವಾರ) ಕರ್ನಾಟಕಕ್ಕೆ ಸೂಚಿಸಿದೆ. 

 ಜೂನ್ ನಲ್ಲಿ 9.19 ಟಿಎಂಸಿ, ಜುಲೈನಲ್ಲಿ 31.23 ಟಿಎಂಸಿ ನೀರು ಬಿಡುವಂತೆ ತಮಿಳುನಾಡಿನ ಮೆಟ್ಟೂರ್ ಅಣೆಕಟ್ಟಿಗೆ ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಜೂನ್ 11ರಂದು ಸೂಚಿಸಿದೆ.

ರಾಜ್ಯದ ಪರ ವಕಾಲತ್ತು ವಹಿಸುತ್ತಿದ್ದ 9 ಮಂದಿಗೆ BSY ಸರ್ಕಾರದಿಂದ ಕೋಕ್, ಸ್ಟ್ರಾಟಜಿ ಏನು?

ಸುಪ್ರೀಂಕೋರ್ಟ್​ ಆದೇಶದಂತೆ 2018ರಲ್ಲಿ ರಚನೆಯಾದ ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರದಿಂದ ಈವರೆಗೂ 6 ಸಭೆಗಳು ನಡೆದಿದ್ದು, ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಭೆಯಲ್ಲಿ ಪ್ರಾಧಿಕಾರ ಪ್ರತಿನಿಧಿಸುವ ನದಿತೀರದ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಜೂನ್​ 12ಕ್ಕೆ ಮೆಟ್ಟೂರ್​ ಡ್ಯಾಂ ತೆರೆಯುವ ತಮಿಳುನಾಡು ಪ್ರಸ್ತಾವನೆಯನ್ನು ಪ್ರಾಧಿಕಾರ ಒಪ್ಪಿಕೊಂಡಿದೆ.

ನದಿಯಲ್ಲಿನ ನೀರಿನ ಹರಿವು ಸಾಮಾನ್ಯವಾಗಿದ್ದರೆ ಜೂನ್ ಮತ್ತು ಜುಲೈ ತಿಂಗಳಿಗೆ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್​ನ ಆದೇಶದಂತೆ ಕರ್ನಾಟಕವು ಬಿಲಿಗುಂಡ್ಲು (ಅಂತರ ರಾಜ್ಯ ಗಡಿ)ವಿನಿಂದ ನೀರು ಬಿಡುಗಡೆ ಮಾಡಬೇಕು ಎಂದು ಪ್ರಾಧಿಕಾರ ನಿರ್ದೇಶಿಸಿರುವುದಾಗಿ ಪ್ರಾಧಿಕಾರದ ಅಧ್ಯಕ್ಷ ರಾಜೇಂದ್ರ ಕುಮಾರ್ ಜೈನ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌