ತೀವ್ರ ಬರಗಾಲದ ನಡುವೆಯೂ ತಮಿಳನಾಡಿಗೆ ಮತ್ತೆ ಕಾವೇರಿ ನೀರು? ರಾಜ್ಯಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ

Published : Mar 09, 2024, 10:29 PM ISTUpdated : Mar 09, 2024, 11:00 PM IST
ತೀವ್ರ ಬರಗಾಲದ ನಡುವೆಯೂ ತಮಿಳನಾಡಿಗೆ ಮತ್ತೆ ಕಾವೇರಿ ನೀರು? ರಾಜ್ಯಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ

ಸಾರಾಂಶ

ರಾಜ್ಯದಲ್ಲಿ ತೀವ್ರ ಬರಗಾಲ, ಕುಡಿಯಲು ನೀರಿಲ್ಲ ತೀವ್ರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಿದ ಸರ್ಕಾರ? ಏಕಾಏಕಿ ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ

ಮಂಡ್ಯ (ಮಾ.9): ಕರ್ನಾಟಕದಲ್ಲಿ ಈ ತೀವ್ರ ಬರಗಾಲದಿಂದ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಪರಿಸ್ಥಿತಿಯಂತೂ ಕೇಳುವುದೇ ಬೇಡ. ದಿನಬಳಕೆಗೆ ನೀರಿಲ್ಲ, ಕುಡಿಯಲು ನೀರಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಿವಾಸದಲ್ಲೇ ನೀರಿಗೆ ಬರ. ಟ್ಯಾಂಕರ್ ಮೂಲಕ ತರಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಆದರೆ ಇಂಥ ಪರಿಸ್ಥಿತಿಯಲ್ಲೂ ಏಕಾಏಕಿ ರಾಜ್ಯಸರ್ಕಾರ ತಮಿಳನಾಡಿಗೆ ನೀರು ಬಿಟ್ಟಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಡ್ಯಾಂನಿಂದ ತಮಿಳನಾಡಿಗೆ 4 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಡುಗಡೆ ಮಾಡಿರುವ ಸರ್ಕಾರ. ಬೆಂಗಳೂರಲ್ಲೇ ಕುಡಿಯಲು ನೀರು ಸಿಗ್ತಿಲ್ಲ. ಬಟ್ಟೆ, ಕಾರು ತೊಳೆದರೂ ಸರ್ಕಾರದಿಂದ ದಂಡದ ಬೆದರಿಕೆ. ಇಂಥ ಪರಿಸ್ಥಿತಿ ಇರುವಾಗ  ತಮಿಳನಾಡುಗೆ ನೀರು ಬಿಟ್ಟಿದ್ದು ಯಾಕೆ? ನಮಗೆ ನೀರಿಲ್ಲ ಪಕ್ಕದ ರಾಜ್ಯಕ್ಕೆ ನೀರು ಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲದ, ದರಿದ್ರ ಸರ್ಕಾರ ಇದು: ಬಿವೈ ವಿಜಯೇಂದ್ರ

ಇಂದು ಮಧ್ಯಾಹ್ನದಿಂದ ಕೆಆರ್‌ಎಸ್ ಡ್ಯಾಂನಿಂದ ತಮಿಳನಾಡಿಗೆ ನೀರು ಹರಿಸುತ್ತಿರುವ ಅಧಿಕಾರಿಗಳು. ಕೆಆರ್‌ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ. ಸದ್ಯ ನೀರಿಲ್ಲದೆ ಒಣಗುತ್ತಿರುವ ಮಂಡ್ಯ ರೈತರ ಬೆಳೆಗಳು. ಮತ್ತೊಂದು ಕಡೆ ಬೆಂಗಳೂರು ಕುಡಿಯುವ ನೀರಿಗೆ ಕಾವೇರಿ ಅವಲಂಬಿಸಿರುವ ಜಿಲ್ಲೆಗಳಲ್ಲಿ ಜೀವ ಜಲಕ್ಕೆ ಹಾಹಾಕಾರ ಶುರುವಾಗಿದೆ. ತೀವ್ರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಹರಿಯುತ್ತಿದೆ ಸರ್ಕಾರ. ಸರ್ಕಾರದ ಈ ನಿರ್ಧಾರ ವಿರುದ್ಧ ರೈತರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ KRS ಡ್ಯಾಂ. ಆದರೆ ಸದ್ಯ ಅಣೆಕಟ್ಟೆಯಲ್ಲಿ ಕೇವಲ 88 ಅಡಿ ಮಾತ್ರ ನೀರು ಲಭ್ಯವಿದೆ. ಇದರಲ್ಲಿ ತಮಿಳುನಾಡಿಗೆ ನೀರು ಬಿಟ್ರೆ ಎರಡುಮೂರು ದಿನದಲ್ಲೇ 70 ಅಡಿಗೆ ಕುಸಿಯಲಿರುವ ನೀರಿನ ಮಟ್ಟ. 70 ಅಡಿಗೆ ನೀರು ಕುಸಿದ್ರೆ ಮತ್ತಷ್ಟು  ಜಲಕ್ಷಾಮ ಉಲ್ಬಣಿಸಲಿರುವ ಸಾಧ್ಯತೆಯಿದೆ.

ಕೆಆರ್‌ಎಸ್ ಡ್ಯಾಂನಿಂದ ನೀರು ಬಿಟ್ಟಿಲ್ಲ: ಇಂಜಿನಿಯರ್ ಸ್ಪಷ್ಟನೆ

ಕೆಆರ್‌ಎಸ್ ಡ್ಯಾಂನಿಂದ ತಮಿಳನಾಡಿಗೆ ನೀರು ಬಿಟ್ಟಿಲ್ಲ. ನೀರಿನ ಸಮಸ್ಯೆ ಸರಿಪಡಿಸಲು ಹೊರಹರಿವಿನ ಪ್ರಮಾಣ ಹೆಚ್ಚಿಸಲಾಗಿದೆ ಎಂದು ಕಾವೇರಿ ನೀರಾವರಿಕ ನಿಗಮದ ಸುಪರಿಡೆಂಟ್ ಇಂಜಿನಿಯರ್ ರಘುರಾಮ್ ಸ್ಷಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಹುಮತ ಬಂದ್ರೆ ಸಂವಿಧಾನ ತಿದ್ದುಪಡಿ ಆಗುತ್ತಾ? ಏನಂದ್ರು ಸಂಸದ ಅನಂತಕುಮಾರ ಹೆಗ್ಡೆ?

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಶಿವ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕುಸಿದಿದೆ. ಮೈನಸ್ 34 ಇಂಚಿಗೆ ನೀರು ಕುಸಿತವಾಗಿದೆ. ಇದ್ರಿಂದ ಬೆಂಗಳೂರಿಗೆ ಸಮರ್ಥವಾಗಿ ನೀರು ಪಂಪ್ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ನೀರಿನ ಸಮಸ್ಯೆ ಉಂಟಾಗಿದೆ. ಸಮಸ್ಯೆ ಸರಿಪಡಿಸಲು KRS ಡ್ಯಾಂನಿಂದ ನೀರು ಬಿಡಲಾಗಿದೆ.  ಬೆಳಗ್ಗೆ ಒಂದೂವರೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು. ಶಿವ ಅಣೆಕಟ್ಟೆಗೆ ನೀರು ರೀಚ್ ಆಗದ ಹಿನ್ನೆಲೆಯಲ್ಲಿ 4 ಸಾವಿರ ಕ್ಯೂಸೆಕ್ ಏರಿಕೆ ಮಾಡಲಾಗಿದೆ. ಭಾನುವಾರ ಸಂಜೆ ಅಥವಾ ಸೋಮವಾರ ಬೆಳಿಗ್ಗೆ ವೇಳೆಗೆ ಶಿವ ಅಣೆಕಟ್ಟೆ ಸಂಪೂರ್ಣ ತುಂಬಲಿದೆ. ಬಳಿಕ KRS ಡ್ಯಾಂನಿಂದ ಬಿಡುತ್ತಿರುವ ಹೊರ ಹರಿವು ನಿಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೊಡ್ಡವರ ಫ್ರೂಟಿ, ಹೊಸವರ್ಷ ಸಂಭ್ರಮಾಚರಣೆ ಬೆನ್ನಲ್ಲೇ ರಮ್ ಪ್ಯಾಕಿಂಗ್‌ಗೆ ಮನಸೋತ ಮದ್ಯಪ್ರಿಯರು
ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್; ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ!