ಬೆಂಗಳೂರು ಗಲಭೆ: ಪೊಲೀಸರು ಫೈರಿಂಗ್‌ಗೆ ಬಳಸಿದ್ದ ಗನ್‌ ಸಿಸಿಬಿ ವಶಕ್ಕೆ

Suvarna News   | Asianet News
Published : Aug 23, 2020, 01:07 PM ISTUpdated : Aug 23, 2020, 01:34 PM IST
ಬೆಂಗಳೂರು ಗಲಭೆ: ಪೊಲೀಸರು ಫೈರಿಂಗ್‌ಗೆ ಬಳಸಿದ್ದ ಗನ್‌ ಸಿಸಿಬಿ ವಶಕ್ಕೆ

ಸಾರಾಂಶ

ಗನ್‌ಗಳನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು| ಇನ್ನು ಹಲವು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಯಲಿರುವ ಸಿಸಿಬಿ| ಫೈರಿಂಗ್‌ಗೆ ಬಳಸಿದ್ದ ಪಿಸ್ತೂಲ್ ಮತ್ತು ಗನ್‌ಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ| 

ಬೆಂಗಳೂರು(ಆ.23):  ಡಿ.ಜೆ ಹಳ್ಳಿ‌-ಕೆ.ಜಿ‌ ಹಳ್ಳಿಯಲ್ಲಿ ನಡೆದ ಗಲಭೆ ಸಂಬಂಧಿಸಿದಂತೆ ಗನ್‌ಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೌದು, ಗಲಭೆಯಲ್ಲಿ ಪೊಲೀಸರು ಫೈರಿಂಗ್‌ಗೆ ಬಳಸಿದ್ದ ಗನ್‌ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

"

ತನಿಖಾ ಹಂತದಲ್ಲಿ ಮಹತ್ವದ ಪಾತ್ರವಿರುವ ಹಿನ್ನೆಲೆಯಲ್ಲಿ ಡಿ.ಜೆ ಹಳ್ಳಿ ಠಾಣಾ ಪೊಲೀಸರು ಬಳಸಿದ್ದ 17 ಎಸ್ಎಲ್ಆರ್ ಗನ್‌ಗಳು ಸಿಸಿಬಿ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ಫೈರಿಂಗ್ ನಡೆದ ಸ್ಥಳಗಳನ್ನ ಎಫ್‌ಎಸ್‌ಎಲ್‌ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.  

ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

ಇನ್ನು ಹಲವು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಲಾಗುತ್ತದೆ. KSRP, CAR ಮತ್ತು ಡಿಜೆಹಳ್ಳಿ ಪೊಲೀಸರು ಬಳಸಿದ್ದ ಬಂದೂಕುಗಳನ್ನ ವಶಕ್ಕೆ ಪಡೆಯಲಾಗಿದೆ. ಫೈರಿಂಗ್‌ಗೆ ಬಳಸಿದ್ದ ಪಿಸ್ತೂಲ್ ಮತ್ತು ಗನ್‌ಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಮುಂದಿನ ತನಿಖಾ ಹಂತದಲ್ಲಿ ಈ ಬಂದೂಕುಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನಕ್ಕೆ ವಿರುದ್ಧ: ಸಂಸದ ಬೊಮ್ಮಾಯಿ
ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ