ಕಾಫೀ ಡೇನಿಂದ ಸ್ವಂತ ಕಂಪನಿಗೆ 3500 ಕೋಟಿ ರೂ. ವರ್ಗಾಯಿಸಿದ್ದ ಸಿದ್ಧಾರ್ಥ!

Published : Jul 25, 2020, 08:15 AM ISTUpdated : Jul 25, 2020, 11:43 AM IST
ಕಾಫೀ ಡೇನಿಂದ ಸ್ವಂತ ಕಂಪನಿಗೆ 3500 ಕೋಟಿ ರೂ. ವರ್ಗಾಯಿಸಿದ್ದ ಸಿದ್ಧಾರ್ಥ!

ಸಾರಾಂಶ

ಸ್ವಂತ ಕಂಪನಿಗೆ 3500 ಕೋಟಿ ವರ್ಗಾಯಿಸಿದ್ದ ಸಿದ್ಧಾರ್ಥ| ಕಾಫಿ ಡೇ ಕಂಪನಿ ನಡೆಸಿದ್ದ ಆಂತರಿಕ ತನಿಖೆಯಿಂದ ಮಾಹಿತಿ

ನವದೆಹಲಿ(ಜು.25): ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

"

ಸಿದ್ದಾರ್ಥ ಅವರ ‘ಮೈಸೂರ್‌ ಅಮಾಲ್ಗಮೇಟೆಡ್‌ ಕಾಫಿ ಎಸ್ಟೇಟ್ಸ್‌ ಲಿ (ಎಂಎಸಿಇಎಲ್‌)’, ಕಾಫಿ ಡೇ ಎಂಟರ್‌ಪ್ರೈಸೆಸ್‌ ಲಿ. (ಸಿಡಿಇಎಲ್‌)ಗೆ 3535 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಈ ಪೈಕಿ 842 ಕೋಟಿ ರು. ಸಾಲದ ಬಗ್ಗೆ ಎಂಎಸಿಇಎಲ್‌ನ ವಾರ್ಷಿಕ ಲೆಕ್ಕಪತ್ರದಲ್ಲಿ ಉಲ್ಲೇಖಿಸಲಾಗಿದೆ. ಉಳಿದ 2693 ಕೋಟಿ ರು. ಬಗ್ಗೆ ಮುಂದೆ ಗಮನಹರಿಸಬೇಕಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥ ಆತ್ಮಹತ್ಯೆ ಮಾಡಿದ್ದ ನೇತ್ರಾವತಿ ಸೇತುವೆಗೆ ತಡೆಬೇಲಿ

ಈ ನಡುವೆ ಬಾಕಿ ಹಣ ವಸೂಲಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ವಸೂಲಿ ಪ್ರಕ್ರಿಯೆ ಮೇಲುಸ್ತುವಾರಿಗೆ ಸುಪ್ರೀಂಕೋರ್ಟ್‌ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇಮಕಕ್ಕೂ ಕಂಪನಿಯ ಅಧ್ಯಕ್ಷರಿಗೆ ಆಡಳಿತ ಮಂಡಳಿ ಅಧಿಕಾರ ನೀಡಿದೆ ಎಂದು ಕಾಫಿ ಡೇ ಸಂಸ್ಥೆ ಷೇರುಮಾರುಕಟ್ಟೆನಿಯಂತ್ರಣಾ ಸಂಸ್ಥೆ ಸೆಬಿಗೆ ಮಾಹಿತಿ ನೀಡಿದೆ.

ಸಿದ್ದಾರ್ಥ ಅವರ ಸ್ವಂತ ಕಂಪನಿಯಾದ ಎಂಎಸಿಇಎಲ್‌, ಸಿಡಿಇಎಲ್‌ನ 49 ಸಹ ಸಂಸ್ಥೆಗಳ ಜೊತೆ ಹಣಕಾಸು ವ್ಯವಹಾರ ಹೊಂದಿತ್ತು. ಸಿಡಿಇಎಲ್‌ನ ವಿವಿಧ ಕಂಪನಿಗಳಿಂದ ಎಂಎಸಿಇಲ್‌ ಮುಂಗಣ ಹಣ ಪಡೆದುಕೊಂಡಿತ್ತು. ಈ ಎಲ್ಲಾ ವ್ಯವಹಾರಗಳು ಸಾಮಾನ್ಯ ಬ್ಯಾಂಕಿಂಗ್‌ ವಹಿವಾಟಿನ ಸ್ವರೂಪದಲ್ಲೇ ನಡೆದಿತ್ತು. ಹೀಗೆ ಪಡೆದ ಬಹುತೇಕ ಹಣವನ್ನು ಪಿಇ ಹೂಡಿಕೆದಾರರಿಂದ ಷೇರು ಮರುಖರೀದಿಗೆ, ಸಾಲ ಮರುಪಾವತಿಗೆ, ಬಡ್ಡಿ ಪಾವತಿಗೆ, ಇತರೆ ಕೆಲ ಖಾಸಗಿ ಹೂಡಿಕೆಗೆ ಬಳಸಿರುವ ಸಾಧ್ಯತೆ ಇದೆ ಎಂದು ಸಮಿತಿ ಹೇಳಿದೆ.

ಇದೇ ವೇಳೆ ಆದಾಯ ತೆರಿಗೆ ಇಲಾಖೆ ಕಿರುಕುಳದಿಂದಲೇ ಸಿದ್ಧಾರ್ಥ ಸಾವನ್ನಪ್ಪಿದವರು ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ತನಿಖೆ ವೇಳೆ ಒದಗಿಸಿಲ್ಲ ಎಂದು ಸಮಿತಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್