ಕೊರೋನಾ ನಿಯಂತ್ರಣ: ಕರ್ನಾಟಕದ ಕ್ರಮಕ್ಕೆ ಕೇಂದ್ರ ಶ್ಲಾಘನೆ

Published : Mar 03, 2021, 07:40 AM IST
ಕೊರೋನಾ ನಿಯಂತ್ರಣ: ಕರ್ನಾಟಕದ ಕ್ರಮಕ್ಕೆ ಕೇಂದ್ರ ಶ್ಲಾಘನೆ

ಸಾರಾಂಶ

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ, ಎರಡನೇ ಅಲೆ ಭೀತಿ| ತುಮಕೂರು ಜಿಲ್ಲೆ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ಆರೋಗ್ಯ ಇಲಾಖೆಯ ತಂಡದ ಸದಸ್ಯರು| ಕೋವಿಡ್‌ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಶ್ಲಾಘನೆ| 

ಬೆಂಗಳೂರು(ಮಾ.03): ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ತೆಗೆದುಕೊಂಡ ಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಇಲಾಖೆಯ ತಂಡ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳನ್ನು ಇನ್ನಷ್ಟು ತೀವ್ರಗೊಳಿಸುವಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ, ಎರಡನೇ ಅಲೆ ಭೀತಿ ಹಾಗೂ ಕೋವಿಡ್‌ ಲಸಿಕೆ ಅಭಿಯಾದ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಆರೋಗ್ಯ ಇಲಾಖೆಯ ತಂಡದ ಸದಸ್ಯರು ಮಂಗಳವಾರ ತುಮಕೂರು ಜಿಲ್ಲೆ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೋನಾ ಮರೆತ ಬೆಂಗಳೂರ ಜನ.. ವಿಕೆಂಟ್ ಮಸ್ತಿ ಬಲು ಜೋರು!

ಬಳಿಕ ಬೆಂಗಳೂರಿಗೆ ಆಗಮಿಸಿದ ತಂಡ ಸದಸ್ಯರು ಬಿಬಿಎಂಪಿ ಅಧಿಕಾರಿಗಳೊಂದಿಗೂ ಸಭೆ ನಡೆಸಿ, ನಗರದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಶ್ಲಾಘಿಸಿದರು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!