ರಾಜ್ಯದ ಮೊಬೈಲ್‌ ಆ್ಯಪ್‌ ಬೆಳೆ ಸಮೀಕ್ಷೆಗೆ ಕೇಂದ್ರದ ಮೆಚ್ಚುಗೆ

Kannadaprabha News   | Asianet News
Published : Sep 01, 2021, 08:17 AM ISTUpdated : Sep 01, 2021, 08:35 AM IST
ರಾಜ್ಯದ ಮೊಬೈಲ್‌ ಆ್ಯಪ್‌ ಬೆಳೆ ಸಮೀಕ್ಷೆಗೆ ಕೇಂದ್ರದ ಮೆಚ್ಚುಗೆ

ಸಾರಾಂಶ

*  ಕಳೆದ ಬಾರಿಯಂತೆ ಎಲ್ಲ ಕೃಷಿ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಬೇಕು  *  ‘ಅಗ್ರಿ ಟ್ರೆಂಡ್‌ ಸೆಟ್ಟರ್‌’ ಎಂಬ ಹೆಗ್ಗಳಿಕೆಗೂ ಪಾತ್ರವಾದ ಮೊಬೈಲ್‌ ಆ್ಯಪ್‌ ಬೆಳೆ ಸಮೀಕ್ಷೆ *  ಇತರೆ ರಾಜ್ಯಗಳಿಗೆ ಮಾದರಿಯಾದ ಕರ್ನಾಟಕದ ಕೃಷಿ ಇಲಾಖೆಯ ಸಾಧನೆ 

ಬೆಂಗಳೂರು(ಸೆ.01): ರಾಜ್ಯದಲ್ಲಿ ಕಳೆದ ವರ್ಷದಿಂದ ಕೈಗೊಂಡಿರುವ ಮೊಬೈಲ್‌ ಆ್ಯಪ್‌ ಮೂಲಕ ನಡೆಸುವ ಬೆಳೆ ಸಮೀಕ್ಷೆ ದೇಶದ ಗಮನ ಸೆಳೆದಿದೆ. ಕೇಂದ್ರದಿಂದ ಮೆಚ್ಚುಗೆಗೆ ಪಾತ್ರವಾಗಿರುವ ಈ ಸಮೀಕ್ಷೆ ಈ ಬಾರಿಯೂ ಯಶಸ್ವಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಮೊಬೈಲ್‌ ಆ್ಯಪ್‌ ಬೆಳೆ ಸಮೀಕ್ಷೆ ಪ್ರಗತಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯಾದ್ಯಂತ ಇತರೆ ಇಲಾಖೆಗಳ ಸಹಯೋಗದಲ್ಲಿ ಬೆಳೆ ಸಮೀಕ್ಷೆ ಕ್ಷಿಪ್ರಗತಿಯಲ್ಲಿ ನಡೆದು ಯಶಸ್ವಿಯಾಗಿತ್ತು. ಇತರೆ ರಾಜ್ಯಗಳಿಗೆ ಕರ್ನಾಟಕದ ಕೃಷಿ ಇಲಾಖೆಯ ಈ ಸಾಧನೆ ಮಾದರಿಯೂ ಆಗಿದೆ ಎಂದು ತಿಳಿಸಿದ್ದಾರೆ.  

ನಿಮ್ಮ ಬೆಳೆ ಮುಂದೆ ನಿಂತು ಫೊಟೊ ಕಳಿಸಿ ಪರಿಹಾರ ಪಡೆಯಿರಿ

ಕೇಂದ್ರದಿಂದ ‘ಅಗ್ರಿ ಟ್ರೆಂಡ್‌ ಸೆಟ್ಟರ್‌’ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಂತಹ ಸಾಧನೆ ಇನ್ನು ಮುಂದೆಯೂ ಆಗಬೇಕು. ರೈತ ತಾನೇ ತನ್ನ ಬೆಳೆಗೆ ಪ್ರಮಾಣ ಪತ್ರ ನೀಡುವಂತಹ, ಜಮೀನಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅರ್ಹನೆಂದು ಹೇಳಿಕೊಳ್ಳುವಂತಹ ಮೊಬೈಲ್‌ ಬೆಳೆ ಸಮೀಕ್ಷೆ ನಿರಂತರವಾಗಿ ನಡೆಯಬೇಕು. ಕಳೆದ ಬಾರಿಯಂತೆ ಎಲ್ಲಾ ಕೃಷಿ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್