ಹೆಚ್ಚು ಕಲ್ಲಿದ್ದಲು ಪೂರೈಸಲು ಕೇಂದ್ರ ಸಮ್ಮತಿ: ಸಿಎಂ ಬೊಮ್ಮಾಯಿ

Kannadaprabha News   | Asianet News
Published : Oct 10, 2021, 07:13 AM IST
ಹೆಚ್ಚು ಕಲ್ಲಿದ್ದಲು ಪೂರೈಸಲು ಕೇಂದ್ರ ಸಮ್ಮತಿ: ಸಿಎಂ ಬೊಮ್ಮಾಯಿ

ಸಾರಾಂಶ

*   ಪ್ರಸ್ತುತ 10 ರೇಕ್‌ ಬರುತ್ತಿದೆ, 14ಕ್ಕೆ ಹೆಚ್ಚಿಸಲು ಸಚಿವ ಜೋಶಿ ಒಪ್ಪಿಗೆ: ಸಿಎಂ *   ಹೆಚ್ಚುವರಿ ರಸಗೊಬ್ಬರ, ಕೋವಿಡ್‌ ಲಸಿಕೆ *   ನಡ್ಡಾ ಭೇಟಿ ಇಲ್ಲ

ಬೆಂಗಳೂರು(ಅ.10): ಕಲ್ಲಿದ್ದಲು(Coal) ಕೊರತೆ ನೀಗಿಸಲು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ಅವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.

ದೆಹಲಿಯಿಂದ(Delhi) ಹಿಂತಿರುಗಿದ ಬಳಿಕ ಶನಿವಾರ ನಗರದಲ್ಲಿ(Bengaluru) ಸುದ್ದಿಗಾರರ ಜತೆ ಮಾತನಾಡಿದ ಅವರು, ಕಲ್ಲಿದ್ದಲಿನ ಕೊರತೆ ಇಡೀ ಭಾರತ(India) ದೇಶವನ್ನು ಬಾಧಿಸುತ್ತಿದೆ. ಕರ್ನಾಟಕದಲ್ಲಿ(Karnataka) ಕಲ್ಲಿದ್ದಲ್ಲಿನ ಸಂಗ್ರಹ ಕಡಿಮೆಯಾಗಬಾರದು ಎಂಬ ದೃಷ್ಟಿಯಿಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಮನವಿ ಮಾಡಲಾಗಿದೆ. ರಾಜ್ಯಕ್ಕೆ ಪ್ರಸ್ತುತ ಸರಬರಾಜು ಆಗುತ್ತಿರುವ 10 ರೇಕ್‌ ಕಲ್ಲಿದ್ದಲು ಪ್ರಮಾಣವನ್ನು ಹೆಚ್ಚಿಸಿ 14 ರೇಕ್‌ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಕರುನಾಡಿಗೆ ಕಾದಿದೆಯಾ ಕಗ್ಗತ್ತಲ ಶಾಕ್‌..?

ಹೆಚ್ಚುವರಿ ರಸಗೊಬ್ಬರ, ಕೋವಿಡ್‌ ಲಸಿಕೆ:

ಕೇಂದ್ರ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್‌ಸುಖ್‌ ಮಾಂಡವೀಯ(Mansukh Mandaviya) ಅವರನ್ನು ಭೇಟಿಯಾಗಿ ರಬಿ ಹಂಗಾಮಿಗೆ ಹೆಚ್ಚಿನ ಡಿಎಪಿ ಮತ್ತು ಎಂಓಪಿ ಒದಗಿಸಲು ಮನವಿ ಮಾಡಲಾಯಿತು. ಇದನ್ನು ಒಂದು ವಾರದೊಳಗೆ ಒದಗಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದ ಅವರು, ರಾಜ್ಯದಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಮೊದಲನೇ ಡೋಸ್‌ ಶೇ.90ರಷ್ಟು ಮತ್ತು ಎರಡನೇ ಡೋಸ್‌ ಶೇ.70(Vaccine) ಕೊಡುವ ಗುರಿಗೆ ಕೇಂದ್ರ ಆರೋಗ್ಯ ಸಚಿವರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.

ನಡ್ಡಾ ಭೇಟಿ ಇಲ್ಲ:

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಅವರು ಅನ್ಯ ಕಾರ್ಯದಲ್ಲಿ ನಿರತರಾಗಿದ್ದರು. ಹೀಗಾಗಿ ಅವರ ಭೇಟಿ ಸಾಧ್ಯವಾಗಿಲ್ಲ. ಸಚಿವ ಸಂಪುಟ ವಿಸ್ತರಣೆ(Cabinet Expansion) ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು