ಕೇಂದ್ರದಿಂದ ತಮಿಳುನಾಡಿಗೆ ನೆರವು, ರಾಜ್ಯಕ್ಕೆ ಅನ್ಯಾಯ : ರೇವಣ್ಣ

Kannadaprabha News   | Asianet News
Published : Mar 10, 2021, 08:43 AM IST
ಕೇಂದ್ರದಿಂದ ತಮಿಳುನಾಡಿಗೆ ನೆರವು, ರಾಜ್ಯಕ್ಕೆ ಅನ್ಯಾಯ : ರೇವಣ್ಣ

ಸಾರಾಂಶ

ತಮಿಳುನಾಡಿನ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವ ಮೂಲಕ ಕಾವೇರಿ ಅಚ್ಚುಕಟ್ಟು ಪ್ರದೇಶದ 11 ಜಿಲ್ಲೆಗಳಿಗೆ ಅನ್ಯಾಯ ಮಾಡಿದೆ ಎಂದು ಎಚ್ ಡಿ ರೇವಣ್ಣ ಆರೋಪಿಸಿದರು. 

ಬೆಂಗಳೂರು (ಮಾ.10): ಕಾವೇರಿ ನದಿ ನೀರು ಹೆಚ್ಚುವರಿ ಬಳಕೆ ಮಾಡಿಕೊಳ್ಳುವ ತಮಿಳುನಾಡಿನ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವ ಮೂಲಕ ಕಾವೇರಿ ಅಚ್ಚುಕಟ್ಟು ಪ್ರದೇಶದ 11 ಜಿಲ್ಲೆಗಳಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಜೆಡಿಎಸ್‌ ಸದಸ್ಯ ಎಚ್‌.ಡಿ.ರೇವಣ್ಣ ಟೀಕಿಸಿದರು. 

ನಿಲುವಳಿ ಸೂಚನೆ ವೇಳೆ ಮಾತನಾಡಿದ ಅವರು, ತಮಿಳುನಾಡು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 10,345 ಕೋಟಿ ರು. ಆರ್ಥಿಕ ನೆರವು ನೀಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಪಕ್ಷಾತೀತವಾಗಿ ಇದರ ವಿರುದ್ಧ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು. ಈ ವೇಳೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಆಶ್ವಾಸನೆ ನೀಡಿದರು.

ಮತ್ತೊಂದು ಸಿ.ಡಿ.ಸ್ಫೋಟ: ಸದನದಲ್ಲಿ CD ತೋರಿಸಿದ ಎಚ್.ಡಿ.ರೇವಣ್ಣ ...

ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ 11 ಜಿಲ್ಲೆಗೆ ಯೋಜನೆಯಿಂದ ಸಮಸ್ಯೆಯಾಗಲಿದೆ. ತಮಿಳುನಾಡು ಕೈಗೆತ್ತಿಗೊಂಡಿರುವ ಯೋಜನೆಯಿಂದ ಅಲ್ಲಿನ ಐದು ಜಿಲ್ಲೆಗಳಿಗೆ ಉಪಯೋಗವಾಗಲಿದೆ. ರಾಜ್ಯ ಸರ್ಕಾರವು ರಾಜ್ಯದ ಹಿತ ಕಾಯಲು ಇಂತಹ ಚಿಂತನೆ ಯಾಕೆ ಮಾಡುವುದಿಲ್ಲ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!