
ನವದೆಹಲಿ (ಜ.28): ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ 2020-21 ಹಣಕಾಸು ವರ್ಷದ ಎರಡನೇ ಕಂತಿನ ಅನುದಾನವಾಗಿ 2412 ಕೋಟಿ ಬಿಡುಗಡೆ ಮಾಡಿದೆ.
ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಶಿಫಾರಸಿನ ಮೇರೆ ಕೇಂದ್ರ ಹಣಕಾಸು ಸಚಿವಾಲಯ 18 ರಾಜ್ಯಗಳಿಗೆ ಒಟ್ಟು 12,351 ಕೋಟಿ ರು.ಬಿಡುಗಡೆ ಮಾಡಿದೆ.
ಒಟ್ಟಾರೆ ಈ ಹಣ ಬಿಡುಗಡೆಯಾದ ಹತ್ತು ದಿನದೊಳಗೆ ರಾಜ್ಯ ಸರ್ಕಾರವು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕು. 10 ದಿನ ಮೀರಿದಲ್ಲಿ ಅನುದಾನ ಬಡ್ಡಿ ಸಮೇತ ನೀಡಬೇಕು ಎಂದು ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
'ಮೋದಿ ಜೀ ಜತೆ ಗೇಮ್ ಆಡುವಾಸೆ: ನನಗೆ ಪ್ರಧಾನಿಯೇ ಸ್ಪೂರ್ತಿ' ...
ಈ ಅನುದಾನವು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಹಂಚಲ್ಪಡಲಿದೆ. ಮೊದಲನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಕಳೆದ ವರ್ಷ ಜೂನ್ನಲ್ಲಿ ಬಿಡುಗಡೆ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ