
ಬೆಂಗಳೂರು, (ಡಿ.13): ರಾಜ್ಯದಲ್ಲಿ ಪ್ರವಾಹದಿಂದ ಹಾನಿ ಸಂಭವಿಸಿದ್ದರಿಂದ ಅದರ ಅಧ್ಯಯನ ನಡೆಸಲು ಇಂದು (ಭಾನುವಾರ) ಕೇಂದ್ರ ಅಧ್ಯಯನ ತಂಡ ಆಗಮಿಸಿದೆ.
ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪರನವರ ಜೊತೆ ಕೇಂದ್ರ ತಂಡ ಮಾತುಕತೆ ನಡೆಸಿತು. ಈ ವೇಳೆ, ಕೇಂದ್ರ ಅಧ್ಯಯನ ತಂಡಕ್ಕೆ ಬಿಎಸ್ವೈ ಪ್ರವಾಹದಿಂದ ಉಂಟಾದ ಹಾನಿಯ ವಿವರಣೆ ನೀಡಿದರು.
ಸಾರಿಗೆ ನೌಕರರ ಜೊತೆಗಿನ ಸರ್ಕಾರದ ಸಂಧಾನ ಸಕ್ಸಸ್: ಮುಷ್ಕರ್ ವಾಪಸ್
ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಸಂಭವಿಸಿದ್ದ ಪ್ರವಾಹ ಪ್ರದೇಶಗಳಿಗೆ 3 ದಿನಗಳ ಕಾಲ ಕೇಂದ್ರ ತಂಡ ಅಧ್ಯಯನ ನಡೆಸಲಿದ್ದು, ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ರಮೇಶ್ ಕುಮಾರ್ ಗಂಠಿ ನೇತೃತ್ವದ 6 ಅಧಿಕಾರಿಗಳ ತಂಡ ನೆರೆಯಿಂದ ಹಾನಿಯಾದ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
* ಸೋಮವಾರ ಮೊದಲ ತಂಡ ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ. 2ನೇ ತಂಡ ವಿಜಯನಗರ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಿದ್ದು 3ನೇ ತಂಡ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.
* ಮಂಗಳವಾರ ಮೂರೂ ತಂಡ ಬೆಂಗಳೂರಿಗೆ ಆಗಮಿಸಿ ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ