ಬೆಂಬಲ ಬೆಲೆ ಅಡಿ ಕೇಂದ್ರದಿಂದ ಹೆಸರು, ಉದ್ದು, ಶೇಂಗಾ ಖರೀದಿ

Kannadaprabha News   | Kannada Prabha
Published : Sep 21, 2025, 06:42 AM IST
Kannada actress Ranya rao gold smuggling case Union minister pralhad joshi reacts

ಸಾರಾಂಶ

ಅತಿವೃಷ್ಟಿಯಿಂದಾಗಿ ತತ್ತರಿಸಿರುವ ಕರ್ನಾಟಕದ ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ಒತ್ತಾಸೆ ಮೇರೆಗೆ ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ.

ನವದೆಹಲಿ : ಅತಿವೃಷ್ಟಿಯಿಂದಾಗಿ ತತ್ತರಿಸಿರುವ ಕರ್ನಾಟಕದ ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ಒತ್ತಾಸೆ ಮೇರೆಗೆ ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ.

2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಕೇಂದ್ರ ಕೃಷಿ ಸಚಿವರು ಜೋಶಿ ಅವರಿಗೆ ಖುದ್ದು ಪತ್ರ ಬರೆದು ಮಾಹಿತಿ ನೀಡಿದ್ದಾರೆ.ಪ್ರಸಕ್ತ ಮುಂಗಾರಿನಲ್ಲಿ ಕರ್ನಾಟಕದ ಬೆಳೆಗಾರರು ಅತಿವೃಷ್ಟಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್‌ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ನೆರವಾಗುವಂತೆ ಕೋರಿ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್‌ ಚವ್ಹಾಣ್‌ ಅವರಿಗೆ ಪತ್ರ ಬರೆದಿದ್ದರು.ಈ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ತಕ್ಷಣವೇ ಕರ್ನಾಟಕದ ರೈತರ ನೆರವಿಗೆ ಮುಂದಾಗುವಂತೆ ತಿಳಿಸಿದ್ದರು. ಅಂತೆಯೇ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್‌ ಚವ್ಹಾಣ್‌ ಅವರು ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಸಹ ನೀಡಿದ್ದಾರೆ.

ಯಾವುದೆಷ್ಟು ಖರೀದಿಗೆ ಕೇಂದ್ರ ಅಸ್ತು?:

ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಕರ್ನಾಟಕದಿಂದ 38000 ಮೆಟ್ರಿಕ್‌ ಟನ್‌ ಹೆಸರು ಕಾಳು, 60,810 ಮೆಟ್ರಿಕ್‌ ಟನ್‌ ಉದ್ದು, 15,650 ಮೆಟ್ರಿಕ್‌ ಟನ್‌ ಸೂರ್ಯಕಾಂತಿ, 61,148 ಮೆಟ್ರಿಕ್‌ ಟನ್‌ ಕಡಲೆಬೀಜ ಮತ್ತು 1,15,000 ಮೆಟ್ರಿಕ್‌ ಟನ್‌ ಸೋಯಾಬಿನ್ ಖರೀದಿಗೆ ಅನುಮತಿ ನೀಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಜಿಲ್ಲಾವಾರು ಖರೀದಿ ಕೇಂದ್ರಕ್ಕೆ ಜೋಶಿ ಒತ್ತಾಯ:

ಕೇಂದ್ರ ಸರ್ಕಾರವು ಕರ್ನಾಟಕದ ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ಯೋಜನೆ ನೆರವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಒದಗಿಸಬೇಕು. ಈ ಕೂಡಲೇ ರಾಜ್ಯಾದ್ಯಂತ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಜೋಶಿ ಒತ್ತಾಯಿಸಿದ್ದಾರೆ.ಪ್ರಧಾನಿ ಮತ್ತು ಕೃಷಿ ಸಚಿವರಿಗೆ ಧನ್ಯವಾದ:

ಕರ್ನಾಟಕದ ರೈತರ ಸಂಕಷ್ಟ ಅರಿತು ಈ ಮೂಲಕ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್‌ ಚವ್ಹಾಣ್‌ ಅವರಿಗೆ ಸಚಿವ ಜೋಶಿ ರಾಜ್ಯದ ರೈತರ ಪರವಾಗಿ ಧನ್ಯವಾದ ಸಹ ಅರ್ಪಿಸಿದ್ದಾರೆ.

ರಾಜ್ಯ ಸರ್ಕಾರ ಖರೀದಿ

ಕೇಂದ್ರ ಆರಂಭಿಸಲಿ

ಕೇಂದ್ರದ ಬೆಂಬಲ ಬೆಲೆ ಯೋಜನೆಗೆ ರಾಜ್ಯ ಸರ್ಕಾರವೂ ನೆರವು ನೀಡಬೇಕು. ಈ ಕೂಡಲೇ ರಾಜ್ಯಾದ್ಯಂತ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್
ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ