ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ

Kannadaprabha News   | Asianet News
Published : Sep 07, 2020, 07:21 AM IST
ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ

ಸಾರಾಂಶ

ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡವು ಆಗಮಿಸಲಿದ್ದು,  ರಾಜ್ಯದಲ್ಲಿ ಪರಿಶೀಲನೆ ನಡೆಸಲಿದೆ. ಪರಿಹಾರ ಸಂಬಂಧವಾಗಿ ಪರಿಶೀಲನೆ ನಡೆಸಲಿದೆ.

ಬೆಂಗಳೂರು (ಸೆ.07): ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಸಂಬಂಧ ಅಧ್ಯಯನಕ್ಕಾಗಿ ಕೇಂದ್ರದ ಅಧಿಕಾರಿಗಳ ತಂಡ ಸೋಮವಾರ ರಾಜ್ಯಕ್ಕೆ ಆಗಮಿಸಲಿದೆ.

ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್‌ ಅವರ ನೇತೃತ್ವದ ಎನ್‌ಡಿಆರ್‌ಎಫ್‌ ತಂಡ ಎರಡು-ಮೂರು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡು ನೆರೆಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ನಡೆಸುವ ಸಾಧ್ಯತೆ ಇದೆ. 

ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು ಭೇಟಿಯಾಗಲಿದ್ದಾರೆ. ಈ ವೇಳೆ ನೆರೆ ಹಾನಿ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಕರ್ನಾಟಕ, ಕರಾವಳಿಯ ಜನರು ನಿರಾಳ ...

 ಸಭೆಯ ಬಳಿಕ ಮಂಗಳವಾರದಿಂದ ಎರಡು ತಂಡಗಳಾಗಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಸ್ಥಿತಿ ಕುರಿತು ಸ್ಥಳೀಯರು ಮತ್ತು ಜಿಲ್ಲಾಡಳಿತ ಜೊತೆಗೆ ಚರ್ಚೆ ನಡೆಸಲಿದ್ದು, ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ನಷ್ಟ, ಬೆಳೆ ಹಾನಿ, ಜೀವ ಹಾನಿ ಹಾಗೂ ಜಾನುವಾರು ಸಾವುಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!
ಸಿಎಂ ಸ್ಥಾನದ ಜಟಾಪಟಿ: 'ಉರಿತೀರೋದಕ್ಕೆ ಉಪ್ಪು ಹಾಕಬೇಡ' ಎಂದ ಸಿಎಂ, 'ಹಾಗಾದ್ರೆ ಉರೀತಿದೆಯಾ?' - ಅಶೋಕ್..