CET ಸೀಟ್ ದಂದೆಗೆ KEAಯಿಂದ ಬಿಗ್ ಶಾಕ್! ಸದ್ದಿಲ್ಲದೇ ಶುರುವಾಯ್ತಾ ಸೀಟ್ ಬ್ಲಾಕಿಂಗ್?

Published : Sep 17, 2025, 10:39 PM IST
CET Seat Blocking Scam KEA Issues

ಸಾರಾಂಶ

ಸರ್ಕಾರಿ ಕೋಟಾದ ಸೀಟುಗಳನ್ನು ಪಡೆದು ಪ್ರವೇಶಾತಿ ಪಡೆಯದ 351 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೋಕಾಸ್ ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು (ಸೆ.17): ಸರ್ಕಾರಿ ಕೋಟಾದ ಸೀಟುಗಳನ್ನು ಪಡೆದು ಕಾಲೇಜುಗಳಲ್ಲಿ ಅಡ್ಮಿಷನ್ ಮಾಡದೆ ಕಳ್ಳಾಟ ಆಡಿದ 351 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೋಕಾಸ್ ನೋಟಿಸ್ ಜಾರಿ ಮಾಡಿದೆ. CETಯ ಮೂರು ಸುತ್ತಿನ ಸೀಟು ಹಂಚಿಕೆಯ ಬಳಿಕವೂ ಈ ವಿದ್ಯಾರ್ಥಿಗಳು ಅಡ್ಮಿಷನ್ ಪಡೆಯದಿರುವುದರಿಂದ, ಈ ಸೀಟುಗಳು ಖಾಸಗಿ ಕಾಲೇಜುಗಳ ಮ್ಯಾನೇಜ್ಮೆಂಟ್ ಕೋಟಾಕ್ಕೆ ಪರಿವರ್ತನೆಯಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ಫೀಸ್ ಪಡೆದು ಖಾಸಗಿ ಕಾಲೇಜುಗಳು ಅಭ್ಯರ್ಥಿಗಳನ್ನು ಸೇರಿಸಿಕೊಳ್ಳುವ ಅವಕಾಶ ಪಡೆದಿವೆ ಎಂಬ ಆರೋಪ ಕೇಳಿಬಂದಿದೆ.

KEAಯಿಂದ ಕಠಿಣ ಕ್ರಮ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ 351 ಅಭ್ಯರ್ಥಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇವರಿಗೆ ಬೇರೆ ಯಾವುದೇ ಕಾಲೇಜಿನಲ್ಲಿ ಸೀಟು ನೀಡದಂತೆ VTUಗೆ ಸೂಚನೆ ನೀಡಿದೆ. ಈ ಅಭ್ಯರ್ಥಿಗಳ ವಿವರಗಳನ್ನು VTUಗೆ ಸಲ್ಲಿಸಲಾಗಿದ್ದು, VTU ವ್ಯಾಪ್ತಿಯ ಕಾಲೇಜುಗಳಲ್ಲಿ ಸೀಟು ನೀಡದಂತೆ ತಡೆಯಾಜ್ಞೆ ಹೊರಡಿಸಲಾಗಿದೆ.

ಸಮಸ್ಯೆ ಏನು?

  • ಸರ್ಕಾರಿ ಕೋಟಾದ ಸೀಟುಗಳನ್ನು ಬ್ಲಾಕ್ ಮಾಡಿ, ಖಾಸಗಿ ಕಾಲೇಜುಗಳಿಗೆ ಲಾಭ ಗಳಿಸುವ ದಂಧೆ ಶಂಕೆ.
  • ಕಡಿಮೆ ರ‍್ಯಾಂಕ್ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟು ಸಿಗದೆ ಅನ್ಯಾಯ.
  • ಉಚಿತವಾಗಿ ಸರ್ಕಾರಿ ಕೋಟಾದಲ್ಲಿ ಸೇರಬೇಕಿದ್ದ ಅಭ್ಯರ್ಥಿಗಳ ಬದಲಿಗೆ, ಹೆಚ್ಚಿನ ಫೀಸ್ ಕೊಟ್ಟು ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ಪಡೆಯುವ ಅವಕಾಶ.
  • ಸೀಟ್ ಬ್ಲಾಕಿಂಗ್‌ಗೆ ಉತ್ತೇಜನ, ಇದರಿಂದ ಖಾಸಗಿ ಕಾಲೇಜುಗಳಿಗೆ ಸೀಟು ಉಳಿತಾಯ.

KEA ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರ ಪ್ರಕಾರ, ಈ ಅಕ್ರಮಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಸೀಟುಗಳ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ಕೊಡಿಸುವ ಗುರಿಯೊಂದಿಗೆ KEA ಈ ಕಾನೂನು ಕ್ರಮಕ್ಕೆ ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!