ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

Published : Sep 16, 2023, 04:09 PM IST
ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

ಸಾರಾಂಶ

ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ದಿಢೀರ್‌ ಅಸ್ವಸ್ಥಳಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ನಾಟಕೀಯ ಬೆಳವಣಿಗೆ ನಡೆದಿದೆ. 

ಬೆಂಗಳೂರು (ಸೆ.16): ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ದಿಢೀರ್‌ ಅಸ್ವಸ್ಥಳಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ನಾಟಕೀಯ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಗುರುವಾರ ಚೈತ್ರಾಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಟ್ಟಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಚೈತ್ರಾ ಶುಕ್ರವಾರ ಬೆಳಗ್ಗೆ ಎದ್ದು ಒಂದು ಗಂಟೆ ಯೋಗ ಹಾಗೂ ಧ್ಯಾನ ಮಾಡಿದ್ದಳು. 

ಬಳಿಕ ಸಿಸಿಬಿ ಪೊಲೀಸರು ಆಕೆಯನ್ನು ಸಿಸಿಬಿ ಕಚೇರಿಗೆ ಕರೆತಂದಿದ್ದರು. ಕೆಲ ಸಮಯದ ಬಳಿಕ ಚೈತ್ರಾ ಮೂರ್ಛೆರೋಗ ಬಂದವರ ಹಾಗೆ ಏಕಾಏಕಿ ಅಸ್ವಸ್ಥಳಾಗಿ ಬಾಯಲ್ಲಿ ನೊರೆ ಕಕ್ಕಿಕೊಂಡು ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸಿಸಿಬಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. ವೈದ್ಯರು ಚೈತ್ರಾಳನ್ನು ಎಲ್ಲಾ ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಚೈತ್ರಾ ಮೂರ್ಛೆ ನಾಟಕ: ಮೂರ್ಛೆ ರೋಗ ಬಂದಿದೆ ಎಂದು ಚೈತ್ರಾ ಕುಂದಾಪುರ ಎಂಬಾಕೆಯನ್ನು ಸಿಸಿಬಿ ಪೊಲೀಸರು ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಇಸಿಜಿ, ಬಿಪಿ, ಶುಗರ್‌ ಎಲ್ಲವೂ ನಾರ್ಮಲ್‌ ಇದೆ. ಸಿಟಿ ಸ್ಕ್ಯಾನ್‌ ಸೇರಿದಂತೆ ಎಲ್ಲಾ ಪರೀಕ್ಷೆ ಮಾಡಲಾಗಿದೆ. ಮೂರ್ಛೆ ರೋಗದಿಂದ ಆಕೆ ಕುಸಿದು ಬಿದ್ದಿಲ್ಲ. ಆಕೆ ಬಾಯಲ್ಲಿ ನೊರೆ ಇರಲಿಲ್ಲ. ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆರೋಪಿ ಚೈತ್ರಾ ಸಿಸಿಬಿ ಪೊಲೀಸರ ವಿಚಾರಣೆ ತಪ್ಪಿಸಿಕೊಳ್ಳಲು ಮೂರ್ಛೆ ನಾಟಕ ಮಾಡಿದ್ದಾಳೆ ಎನ್ನಲಾಗಿದೆ.

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?

ಚೈತ್ರಾಳಿಗೆ ಈ ಹಿಂದೆ ಮೂರ್ಛೆ ರೋಗ ಇತ್ತು. ಸಾರ್ವಜನಿಕ ಭಾಷಣದ ವೇಳೆ ಮೂರ್ಛೆ ಹೋಗಿದ್ದಳು ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಖಚಿತತೆ ಇಲ್ಲ. ವಿಚಾರಣೆ ವೇಳೆ ಆಕೆಗೆ ಮೂರ್ಛೆ ಬಂದಿರಲಿಲ್ಲ. ಬದಲಾಗಿ ಆಕೆ ಮೂರ್ಛೆ ಹೋದ ಹಾಗೆ ನಟಿಸಿ ಡ್ರಾಮ ಸೃಷ್ಟಿಸಿದ್ದಾಳೆ. ಸಿಸಿಬಿ ಪೊಲೀಸರು ಶನಿವಾರ ಆಕೆಯ ಆರೋಗ್ಯ ಚೇತರಿಕೆ ನೋಡಿಕೊಂಡು ಮತ್ತೆ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಲಿದ್ದಾರೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇ-ಕೆವೈಸಿ, ಆಧಾರ ಲಿಂಕ್ ಮಾಡಿಸದ 6 ಲಕ್ಷ ರೈತರಿಗೆ ಬಂದಿಲ್ಲ ‘ಕಿಸಾನ್‌ ಸಮ್ಮಾನ್‌’ ಹಣ! ನಿಮಗೂ ಬಂದಿಲ್ವ? ಮೊದಲು ಈ ಕೆಲಸ ಮಾಡಿ
Bloom Avenue Greening Project: ಬೆಂಗಳೂರು ರಸ್ತೇಲಿ ವರ್ಷವಿಡೀ ಅರಳಲಿವೆ ಬಣ್ಣದ ಹೂಗಳು!