ಚೈತ್ರಾ ಕುಂದಾಪುರ ಗ್ಯಾಂಗ್‌ನ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಓರಿಸ್ಸಾದಲ್ಲಿ ಬಂಧನ

Published : Sep 19, 2023, 11:21 AM ISTUpdated : Sep 19, 2023, 11:45 AM IST
ಚೈತ್ರಾ ಕುಂದಾಪುರ ಗ್ಯಾಂಗ್‌ನ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಓರಿಸ್ಸಾದಲ್ಲಿ ಬಂಧನ

ಸಾರಾಂಶ

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಎ3 ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ. 

ಬೆಂಗಳೂರು (ಸೆ.19): ಉಡುಪಿಯ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವ ನಿಟ್ಟಿನಲ್ಲಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಎ3 ಆರೋಪಿ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓರಿಸ್ಸಾದಲ್ಲಿ ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಈ ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆನ್ನಲ್ಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೋರ್ಟ್‌ ನಿರ್ದೇಶದನದ ಮೇರೆಗೆ ವಿಚಾರಣೆ ಮಾಡಲಾಗುತ್ತದೆ. ಆದರೆ, ಪೊಲೀಸರ ಬಂಧನದಿಂದ ತಪ್ಪಿಸಿಕೊಂಡಿದ್ದ ಅಭಿನವ ಸ್ವಾಮೀಜಿ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು. ಆದರೆ, ಬೇಲ್ ನೀಡಲು ಕೋರ್ಟ್‌ ನಿರಾಕರಣೆ ಮಾಡಿತ್ತು. ಇದಾದ ನಂತರ ಮೈಸೂರು, ಬೆಂಗಳೂರು, ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. 

ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

ಟೀಶರ್ಟ್‌ ಧರಿಸಿ ರೈಲಿನಲ್ಲಿ ಹೋಗ್ತಿದ್ದ ಸ್ವಾಮೀಜಿ, ಸಿನಿಮೀಯ ಶೈಲಿಯಲ್ಲಿ ಬಂಧನ: ಇನ್ನು ಕರ್ನಾಟಕದ ಮೈಸೂರಿಗೆ ಹೋಗಿದ್ದ ಸ್ವಾಮೀಜಿ ಅಲ್ಲಿಂದ ಕಾರಿನಲ್ಲಿ ಆಂಧ್ರಪ್ರದೇಶಕ್ಕೆ ತೆರಳಿದ್ದರು. ಅಲ್ಲಿನ ಹೈದರಾಬಾದ್‌ ವಿಮಾನ ನಿಲ್ದಾಣದಿಂದ ಓಡಿಶಾದ ಕಟಕ್‌ಗೆ ತೆರಳಿದ್ದರು, ಸ್ವಾಮೀಜಿ ಟೀಶರ್ಟ್‌ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ರೈಲಿನಲ್ಲಿ ಬೇರೊಬ್ಬನ ಜೊತೆಗೆ ಪ್ರಯಾಣ ಮಾಡುತ್ತಿದ್ದರು. ಒಡಿಶಾದ ಪೊಲೀಸರ ಸಹಾಯದಿಂದ ಕರ್ನಾಟಕದ ಸಿಸಿಬಿ ಪೊಲೀಸರು ಸ್ವಾಮೀಜಿಯನ್ನು ಸಿನಿಮೀಯ ಶೈಲಿಯಲ್ಲಿ ಓಡಿಸಿಕೊಂಡು ಹೋಗಿ ಬಂಧಿಸಿದ್ದಾರೆ. ಇನ್ನು ಒಡಿಶಾದ ಕಟಕ್‌ನಿಂದ ಈಶಾನ್ಯ ರಾಜ್ಯಗಳಿಗೆ ಹೋಗುವ ರೈಲಿನಲ್ಲಿ ಸ್ವಾಮೀಜಿ ಬಂಧನವಾಗಿದ್ದು, ಮಧ್ಯಾಹ್ನ 1.30ರ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಿದ್ದಾರೆ.

ಉಡುಪಿ ಕೇಸ್‌ ದಾಖಲಾಗುವ ಮೊದಲೇ ದೂರು ನೀಡಿದ್ದ ಅಭಿನವ ಸ್ವಾಮೀಜಿ: ಉಡುಪಿಯಲ್ಲಿ ವಂಚನೆಗೊಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ದೂರು ನೀಡುವ ಮೊದಲೇ, ಅಭಿನವ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದರು.  ರಾಜರಾಜೇಶ್ವರಿ ನಗರ ಸಮೀಪದ ಕೆಂಚೇನಹಳ್ಳಿಯ ಪ್ರೀಮಿಯರ್‌ ಟೆಂಪಲ್ ಬೆಲ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಹಾಲಶ್ರೀ ನೆಲೆಸಿದ್ದರು. ಜು.11ರಂದು ಆರ್‌.ಆರ್‌.ನಗರ ಠಾಣೆಗೆ ತೆರಳಿದ ಸ್ವಾಮೀಜಿ, ತಮ್ಮ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿಯ ಕಾಂಗ್ರೆಸ್ ಪಕ್ಷದ ಸೇವಾ ದಳ (ಸಾಮಾಜಿಕ ಜಾಲತಾಣ)ದ ಸಂಚಾಲಕ ಹರ್ಷ ಮೆಂಡನ್‌, ದಿನೇಶ್ ನಾಯ್ಕ್ ಹಳ್ಳಿಹೊಳಿ ಹಾಗೂ ಗೋವಿಂದ ಪೂಜಾರಿ ಅವರ ಹೆಸರು ಉಲ್ಲೇಖಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಹಾಲಶ್ರೀ ಒತ್ತಾಯಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಬೆಂಗಳೂರಲ್ಲಿ ಮಳೆ ಎಚ್ಚರಿಕೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Karnataka News Live 17 September 2026: ವೈಟ್‌ ಟಾಪಿಂಗ್‌ಗಾಗಿ ಮೌರ್ಯ ಸರ್ಕಲ್‌-ರೇಸ್‌ಕೋರ್ಸ್‌ ರೋಡ್‌ ಎರಡು ತಿಂಗಳು ಬಂದ್‌