
ದಾವಣಗೆರೆ (ಅ.12): 'ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ರಾಕ್ಷಸರನ್ನು ಸಮರ್ಥನೆ ಮಾಡಿಕೊಳ್ಳುತ್ತಾ ಬಂದಿದ್ದಾರೆ'ಮಹಿಷಾ ದಸರಾಕ್ಕೆ ಅನುಮತಿ ನೀಡಿದ ರಾಜ್ಯ ಸರ್ಕಾರ, ಮಹಿಷಾ ದಸರಾ ಅಯೋಜಕರ ವಿರುದ್ದ ಕಿಡಿಕಾರಿದ ನಮೋ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು.
ಇಂದು ದಾವಣಗೆರೆಯಲ್ಲಿ ಜನಗಣಮನ ನಮೋ 2.O ಬೈಕ್ ರ್ಯಾಲಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಇಂಥ ಕೆಲಸಗಳು ಹೊಸದೇನಲ್ಲ. ರಾಕ್ಷಸ ಪ್ರವೃತ್ತಿ ಮಾಡಿದವರನ್ನೇ ಅವರೆಲ್ಲ ಸಮರ್ಥನೆ ಮಾಡಿಕೊಂಡು ಬಂದಿದ್ದಾರೆ. ಅದು ಯಾವಾಗಲೂ ರಾಕ್ಷಸರ ಪರ. ಇತ್ತ ಮಹಿಷಾ ದಸರಾ ಬೆಂಬಲಿಸುತ್ತೆ ಅತ್ತ ಇಸ್ರೇಲ್ ಹಮಾಸ್ ಯುದ್ಧದಲ್ಲಿ ಪ್ಯಾಲೆಸ್ತೇನ್ ಹಮಾಸ್ ಉಗ್ರರರನ್ನು ಬೆಂಬಲಿಸುತ್ತೆ ಎಂದು ಕಿಡಿಕಾರಿದರು. ಮಹಿಷಾ ದಸರಾಕ್ಕೆ ಅನುಮತಿ ನೀಡಿರುವುದರಿಂದ ಮೈಸೂರು ಜನತೆ ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವುದು ಸರಿಯಾಗೇ ಇದೆ.
ವಿವಾದಿತ ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ