
ದಾವಣಗೆರೆ (ಜು.28): ಸಂವಿಧಾನದಲ್ಲಿ ಹಾಗೂ ಹಿಂದೂ ಸಂಪ್ರದಾಯದಲ್ಲಿ ಎಲ್ಲರೂ ಸಮಾನರಾಗಿದ್ದಾರೆ. ಯಾವುದೇ ಲಿಂಗಭೇದ ಅಥವಾ ತಾರತಮ್ಯಕ್ಕೆ ಅವಕಾಶವಿಲ್ಲ. ಯಾರು ಯಾರಿಗೆ ಬೇಕಾದ್ರು ಕುಂಕುಮ ಇಡಬಹುದು. ಹೀಗಿರುವಾಗ ನನ್ನ ಪುತ್ರ ಸಂಸದ ಸುನೀಲ್ ಭೋಸ್ ಮಹಿಳಾ ಕೆಎಎಸ್ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿದ್ದರಲ್ಲಿ ತಪ್ಪೇನಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಎಸ್ ಅಧಿಕಾರಿ ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟ ಪ್ರಕರಣದ ಬಗ್ಗೆ ಮಾತನಾಡುತ್ತಾ, ಸರ್ಕಾರಿ ಅಧಿಕಾರಿಗೆ ಕುಂಕುಮ ಇಟ್ಟಿರೋದ್ರಲ್ಲಿ ತಪ್ಪೇನಿದೆ.? ಎಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದ್ದಾರೆ. ಮುಂದುವರೆದು, ಯಾರು ಯಾರಿಗೆ ಬೇಕಾದ್ರು ಕುಂಕುಮ ಇಡಬಹುದು. ಹಿಂದೂ ಸಂಪ್ರದಾಯದಲ್ಲಿ ಸಮಾನತೆ ಅನ್ನೋದು ಇದೆ. ಹೀಗಾಗಿ ಕುಂಕುಮ ಇಟ್ಟಿದಾರೆ ಎಂದು ಸಮಜಾಯಿಸಿ ನೀಡಿದ್ದಾರೆ.
ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಸಂಸದ!
ಇನ್ನು ನನ್ನ ಮಗನಿಗೆ ಮದುವೆ ಆಗಿದಿಯೋ ಇಲ್ವೋ ಅನ್ನೋದು ಅಫಿಡವಿಟ್ ನಲ್ಲಿ ನೋಡಿಕೊಳ್ಳಿ. ಅದನ್ನು ರಿಟರ್ನಿಂಗ್ ಆಫೀಸರ್ ನೋಡಿದ್ದಾರೆ, ಕಾನೂನು ಪ್ರಕಾರ ತಪ್ಪಿದ್ದರೆ ಕ್ರಮ ಆಗುತ್ತದೆ. ಎಲ್ಲವನ್ನೂ ಅಫಿಡವಿಟ್ ನಲ್ಲಿ ಕೊಟ್ಡಿದ್ದಾರೆ. ಎಲೆಕ್ಷನ್ ನಲ್ಲಿ ಬಿಜೆಪಿಯವರು ತಕರಾರು ಹಾಕಿದ್ರು, ನಾಮಪತ್ರ ಸ್ವೀಕೃತಿ ಆಗಿದೆ. ಎಲೆಕ್ಷನ್ ಅರ್ಜಿ ಅಂಗೀಕಾರ ಆಗಿದೆ ಎಂದ ಮೇಲೆ ಕಾನೂನು ರೀತಿ ಎಲ್ಲಾ ಸರಿ ಇದೆ. ಬಿಜೆಪಿ ನಾಯಕರು ಮಾಡದೇ ಇರೋ ಆರೋಪ ಯಾವುದು ಇದೆ. ಸಂವಿಧಾನದಲ್ಲಿ ಎಲ್ಲಾ ಸಮಾನರು ಅಲ್ವಾ.? ಲಿಂಗ ತಾರತಮ್ಯ ಮಾಡಬಾರದು ಅಲ್ವಾ..? ವಾಟ್ ಇಸ್ ದ ಪ್ರಾಬ್ಲಂ ಎಂದು ಮಹದೇವಪ್ಪ ಮಾಧ್ಯಮಗಳ ವಿರುದ್ಧವೇ ಗರಂ ಆದರು.
ಎಲ್ಲ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ; ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಂದು ಸಂಸದ ಸುನೀಲ್ ಭೋಸ್ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ (ಕೆಎಎಸ್ ಅಧಿಕಾರಿ) ಸವಿತಾ ಕೂಡ ಹೋಗಿದ್ದರು. ಸಂಸದರಾಗಿದ್ದರಿಂದ ಹೆಚ್ಚಿನ ಆದ್ಯತೆ ನೀಡಿ ಗರ್ಭಗುಡಿಯೊಳಗೆ ಕರೆದುಕೊಂಡು ವಿಶೇಷ ಪೂಜೆ ಮಾಡಲು ಅವಕಾಶ ನೀಡಿದ್ದರು. ಈ ವೇಳೆ ಇಬ್ಬರೂ ವಿಶೃಷವಾಗಿ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅರ್ಚಕರು ಕೊಟ್ಟ ಕುಂಕುಮವನ್ನು ಸುನೀಲ್ ಭೋಸ್ ತಾವು ಹಚ್ಚಿಕೊಂಡಿದ್ದಲ್ಲದೇ ತಮ್ಮ ಪಕ್ಕದಲ್ಲಿಯೇ ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ನಿಂತಿದ್ದ ಅಧಿಕಾರಿ ಸವಿತಾ ಅವರ ಹೆಗಲ ಮೇಲಿಂದ ಕೈ ಹಾಕಿ ಹಣೆಗೆ ಕುಂಕುಮ ಇಟ್ಟಿದ್ದಾರೆ. ಆದರೆ, ಈ ಬಗ್ಗೆ ರಾಜ್ಯದಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ