ದೀಪಾವಳಿ ಹಬ್ಬಕ್ಕೆ ಭಾರೀ ಮಳೆ ಆತಂಕವಿಲ್ಲ..!

Published : Oct 24, 2022, 12:00 AM IST
ದೀಪಾವಳಿ ಹಬ್ಬಕ್ಕೆ ಭಾರೀ ಮಳೆ ಆತಂಕವಿಲ್ಲ..!

ಸಾರಾಂಶ

ಮುಂದಿನ ಶುಕ್ರವಾರದವರೆಗೆ ರಾಜ್ಯದ ಯಾವೊಂದು ಜಿಲ್ಲೆಗೂ ಭಾರಿ ಮಳೆಯ ‘ಯೆಲ್ಲೋ ಅಲರ್ಟ್‌’ ಸೇರಿದಂತೆ ಯಾವುದೇ ಎಚ್ಚರಿಕೆಗಳನ್ನು ನೀಡಲಾಗಿಲ್ಲ. 

ಬೆಂಗಳೂರು(ಅ.23):  ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದರೂ ಭರ್ಜರಿ ಮಳೆಯ ಸಂಭವ ಕಡಿಮೆ ಎಂದು ಭಾರತೀಯ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಮುಂದಿನ

ಶುಕ್ರವಾರದವರೆಗೆ ರಾಜ್ಯದ ಯಾವೊಂದು ಜಿಲ್ಲೆಗೂ ಭಾರಿ ಮಳೆಯ ‘ಯೆಲ್ಲೋ ಅಲರ್ಟ್‌’ ಸೇರಿದಂತೆ ಯಾವುದೇ ಎಚ್ಚರಿಕೆಗಳನ್ನು ನೀಡಲಾಗಿಲ್ಲ. ಆದರೆ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ಧಾರಾಕಾರ ಮಳೆ: ಚಿಕ್ಕೋಡಿ ರಸ್ತೆ ಮುಳುಗಡೆ, 50 ಮನೆಗಳಿಗೆ ನುಗ್ಗಿದ ನೀರು

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಆಂಧ್ರ ಕರಾವಳಿಗೆ ಅಪ್ಪಳಿಸದೆ ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯತ್ತ ಸಾಗುತ್ತಿರುವುದರಿಂದ ರಾಜ್ಯದ ಒಳನಾಡಿಗಿದ್ದ ಭಾರಿ ಮಳೆಯ ಆತಂಕ ಕಡಿಮೆ ಆಗಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿಯಲ್ಲಿ 2 ಸೆಂ.ಮೀ., ಉತ್ತರಕನ್ನಡದ ಅಂಕೋಲಾ, ಬೆಳಗಾವಿಯ ಗುಂಜಿ, ಕೊಡಗಿನ ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!