
ಗಂಗಾವತಿ (ಅ.4): ಹಿಂದೂ ಮಹಾಮಂಡಳಿಯವರು ಗಣೇಶ ವಿಸರ್ಜನೆ ವೇಳೆ ನಗರದ ಜಾಮೀಯ ಮಸೀದಿ ಮುಂಭಾಗ ರಂಗೋಲಿ ಬಿಡಿಸಿ ಕುಂಡದಲ್ಲಿ ಬೆಂಕಿ ಹಾಕಿ ಮಂಗಳಾರತಿ ಮಾಡಿ ಕುಂಬಳಕಾಯಿ ಒಡೆದು ಪೂಜೆ ಮಾಡಿದ ಯುವಕರು.
ನಿನ್ನೆ ತಡರಾತ್ರಿ ನಡೆದಿರು ಈ ಘಟನೆಯಿಂದ ಉದ್ವಿಗ್ನ. ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದಕ್ಕೆ ಅನ್ಯಕೋಮಿನ ಜನರು ಆಕ್ಷೇಪ. ವಿರೋದ ವ್ಯಕ್ತವಾಗುತ್ತಿದ್ದಂತೆ ಜಮಾವಣೆಗೊಂಡಿದ್ದ ನೂರಾರು ಜನರು. ಶಿವಮೊಗ್ಗ ಗಲಾಟೆಯಂಥ ಪರಿಸ್ಥಿತಿ ನಿರ್ಮಾಣ. ಜಮಾವಣೆಗೊಂಡಿದ್ದ ಜನರನ್ನು ಚದುರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.
ಮಸೀದಿ ಎದುರು ಮಂಗಳಾರತಿ: ಹಿಂದೂ ಕಾರ್ಯಕರ್ತರ ವಿರುದ್ದ ದೂರು
ಗಲಾಟೆ ಮುನ್ಸೂಚನೆ ಅರಿತು ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮ. ಹೆಚ್ಚಿನ ಜನರು ಸ್ಥಳದಲ್ಲಿ ಜಮಾವಣೆಗೊಳ್ಳುತ್ತಲೇ ಎಚ್ಚೆತ್ತ ಪೊಲೀಸ್ ಇಲಾಖೆ. ಮಸೀದಿ ಎದುರು ಡಿ ಜೆ ಬಂದ್ ಮಾಡಿ ಮೆರವಣಿಗೆಯಲ್ಲಿ ಜನರನ್ನ ಕಳಿಸಿದರು. ನಂತರ ಗಣೇಶ ವಿಸರ್ಜನೆಗೆ ಅವಕಾಶ ನೀಡಲಾಯಿತು. ಅಂತೂ ಕೊನೆಗೂ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾದ ಪೋಲೀಸರು. ಗಲಾಟೆ ನಡೆಯುವ ಸಾಧ್ಯತೆಯಿಂದಾಗಿ ಸ್ಥಳದಲ್ಲೇ ಜಿಲ್ಲಾಧಿಕಾರಿ ನಳಿನ್ ಅತುಲ್, ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ಮುಕ್ಕಾಂ ಹೂಡಿದ್ದರು.
ಗಣೇಶೋತ್ಸವಕ್ಕೆ ಕೇಸರಿಮಯವಾಗಿದ್ದ ಶಿವಮೊಗ್ಗ; ಈದ್ ಮಿಲಾದ್ ಹಸಿರುಮಯವಾಯ್ತು ನಗರ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ