ವಿಧಾನಸೌಧದಲ್ಲಿ ರಾಸಾಯನಿಕ ಬಣ್ಣ ಬಳಸುವಂತಿಲ್ಲ

Kannadaprabha News   | Asianet News
Published : Oct 20, 2020, 07:26 AM IST
ವಿಧಾನಸೌಧದಲ್ಲಿ ರಾಸಾಯನಿಕ ಬಣ್ಣ ಬಳಸುವಂತಿಲ್ಲ

ಸಾರಾಂಶ

ವಿಧಾನಸೌಧದಲ್ಲಿ ರಾಸಾಯನಿಕ ಯುಕ್ತ ಬಣ್ಣಗಳ ಬಳಕೆಯನ್ನು ನಿಷೇಧಿಸಲಾಗಿದೆ. 

ಬೆಂಗಳೂರು (ಅ.20):  ಆಯುಧ ಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿ (ಎಂಎಸ್‌ ಬಿಲ್ಡಿಂಗ್‌) ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಹೊರ ಆವರಣದಲ್ಲಿ ಬಳಸದಂತೆ ಸರ್ಕಾರ ಆದೇಶಿಸಿದೆ. ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿವೆ.

 ಆದ್ದರಿಂದ ಆಯುಧ ಪೂಜೆ ನೆರವೇರಿಸುವಾಗ ಕಚೇರಿಯ ಬಳಗೆ ಮತ್ತು ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ, ಕುಂಕುಮ, ಅರಿಶಿನ, ಸುಣ್ಣ ಹಾಗೂ ಇನ್ನಿತರ ವಸ್ತುಗಳನ್ನು ಕಡ್ಡಾಯವಾಗಿ ಬಳಸಬಾರದು.

ವಿಧಾನಸೌಧ, ಹೈಕೋರ್ಟ್‌ ಆವರಣದಲ್ಲಿ 27 ಶೌಚಾಲಯ ನಿರ್ಮಾಣ ..

 ಪೂಜಾ ದಿನದಂದು ಕಚೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಹಾಗೂ ವಿದ್ಯುತ್‌ ಸ್ವಿಚ್‌ಗಳನ್ನು ನಂದಿಸಿ ತೆರಳುವಂತೆ ಸೂಚಿಸಲಾಗಿದೆ. ರಾಸಾಯನಿಕ ಬಣ್ಣಗಳನ್ನು ಬಳಸುವುದರಿಂದ ಹಲವು ತಿಂಗಳು ನೆಲದ ಹಾಸುವಿನ ಮೇಲೆ ಬಣ್ಣ ಉಳಿದುಕೊಳ್ಳುವುದರಿಂದ ಕಟ್ಟಡಗಳ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ.

 ಈ ಹಿಂದೆಯೂ ರಾಸಾಯನಿಕ ಬಣ್ಣ ಬಳಸದಂತೆ ಆದೇಶಿಸಿದ್ದರೂ ನಿಯಮ ಉಲ್ಲಂಘಿಸಲಾಗಿತ್ತು. ಈ ಬಾರಿ ಸೂಚನೆಗಳನ್ನು ಪಾಲಿಸದಿದ್ದಲ್ಲಿ ಸಂಬಂಧಪಟ್ಟ ಶಾಖೆಯವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್