ಮುಸಲ್ಮಾನರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುವೆ: ಶಾಸಕ ಪ್ರದೀಪ್ ಈಶ್ವರ್

Published : Apr 01, 2025, 06:00 AM ISTUpdated : Apr 01, 2025, 06:04 AM IST
ಮುಸಲ್ಮಾನರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುವೆ: ಶಾಸಕ ಪ್ರದೀಪ್ ಈಶ್ವರ್

ಸಾರಾಂಶ

ಚಿಕ್ಕಬಳ್ಳಾಪುರ ತಾಲೂಕಿನ ರೇಣುಮಾಕಲಹಳ್ಳಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನದವರೆಗಿನ ರಸ್ತೆ ನಿರ್ಮಾಣಕ್ಕೆ ಶಾಸಕ ಪ್ರದೀಪ್ ಈಶ್ವರ್ ಚಾಲನೆ ನೀಡಿದರು. ಗ್ರಾಮಸ್ಥರೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ (ಏ.1): ತಾಲೂಕಿನ ರೇಣುಮಾಕಲಹಳ್ಳಿಯಲ್ಲಿ ಮುಸ್ಲಿಂ ಭಾಂಧವರಿಗೆ ರಂಜಾನ್ ಹಬ್ಬದ ಕೊಡುಗೆಯಾಗಿ ಗ್ರಾಮದಿಂದ ಈದ್ಗಾ ಮೈದಾನದವರೆಗಿನ 30 ಲಕ್ಷ ರೂಗಳ ವೆಚ್ಚದ ಕಾಂಕ್ರೀಟ್ ರಸ್ತೆಗೆ ಸೋಮವಾರ ಶಂಕು ಸ್ಥಾಪನೆ ನೆರೆವೇರಿಸಿ, ಗ್ರಾಮಸ್ಥರೊಂದಿಗೆ ಶಾಸಕ ಪ್ರದೀಪ್ ಈಶ್ವರ್ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಕ್ಷೇತ್ರದಲ್ಲಿ ಶಾಸಕನಾಗಿ ಎರಡು ವರ್ಷ ಕಳೆದಿದ್ದು, ಕ್ಷೇತ್ರದ ಅಭಿವೃದ್ಧಿ ಪ್ರಮುಖ ಪಾತ್ರ ವಹಿಸಲಾಗುತ್ತಿದೆ, ಮುಸಲ್ಮಾನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ಇದನ್ನೂ ಓದಿ: ಆ ಮಹಾನುಭಾವ ಏನಂತ ನನಗೆ ಗೊತ್ತು, ಜಗತ್ತು ನೋಡಲಿ: ಪ್ರದೀಪ್ ಈಶ್ವರ್‌ಗೆ ಸಂಸದ ಸುಧಾಕರ್ ಟಾಂಗ್

ಈದ್ಗಾ ರಸ್ತೆ ಕಾಮಗಾರಿಗೆ ಶಂಕು

ಕಳೆದ ಬಾರಿ ರೇಣುಮಾಕಲಹಳ್ಳಿಗೆ ನಮ್ಮೂರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಬಂದಾಗ ಇಲ್ಲಿನ ಮುಸ್ಲಿಂ ಬಾಂಧವರು ಗ್ರಾಮದಿಂದ ಈದ್ಗಾವರೆಗೂ ಇರುವ ರಸ್ತೆ ಹಾಳಾಗಿದ್ದು, ಅದನ್ನು ಸರಿ ಪಡಿಸಿ ಕೊಡುವಂತೆ ಕೇಳಿದ್ದರು. ಇಂದು ಅವರ ಪವಿತ್ರಹಬ್ಬವಾದ ರಂಜಾನ್‌ನಂದು 30 ಲಕ್ಷ ರೂಗಳ ಕಾಂಕ್ರೀಟ್ ರಸ್ತೆಗೆ ಶಂಕುಸ್ಥಾಪನೆಯನ್ನು ಮಾಡಿದ್ದೇನೆ. ಈ ಶಂಕುಸ್ಥಾಪನೆಯನ್ನು ನಮ್ಮ ಹಿಂದು ಪದ್ದತಿಯಂತೆ ಪೂಜೆ ಮತ್ತು ಮುಸಲ್ಮಾನರಂತೆ ದುವ್ವಾ (ಪೂಜೆ) ಯನ್ನು ಮಾಡಿ ಹಿಂದೂ ಮುಸಲಿಂ ಭಾವೈಕ್ಯತೆಗೆ ನಾಂದಿ ಹಾಡಿದ್ದೇವೆಂದರು.

ಸರ್ವ ಸಮುದಾಯಗಳ ಜತೆಗೆ ದೇಶದ ಅಭಿವೃದ್ಧಿಯೆ ಕಾಂಗ್ರೆಸ್ ಪಕ್ಷದ ಮೂಲ ಉದ್ದೇಶವಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್,ಸಬ್ ಕಾ ವಿಶ್ವಾಸ್ ಎಂದರೆ ಎಲ್ಲಾ ಜನಾಂಗದವರ ಅಭಿವೃದ್ದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಎಲ್ಲ ಸಮುದಾಯದವರನ್ನು ಒಂದಾಗಿ ಕಾಣುವಂತೆ, ನಾವು ಕೂಡ ಎಲ್ಲ ಸಮುದಾಯದವರನ್ನು ಜತೆಗೂಡಿಸಿಕೊಂಡು ಒಂದಾಗಿ ಬಾಳಬೇಕಾಗಿದೆ. ಈಮೂಲಕ ಮುಂದಿನ ಪೀಳಿಗೆಗೆ ನಾವೆಲ್ಲರೂ ಒಂದೇ ಎಂಬ ಸಂದೇಶ ನೀಡಬೇಕು. ಸಹಬಾಳ್ವೆಯಿಂದ ಜೀವನ ಸಾಗಿಸಿ ಸುಂದರವಾದ ಸಮಾಜ ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಎಲ್ಲರಲ್ಲೂ ವಿಶ್ವಾಸ ವೃದ್ಧಿಯಾಗಲಿ

ದೇಶವನ್ನು ಕಟ್ಟಲು ಅಭಿವೃದ್ಧಿಯತ್ತ ಸಾಗಿಸಲು ಎಲ್ಲ ಸಮು ದಾಯದವರ ಸಹಕಾರ ಅಗತ್ಯ. ವಿಭಿನ್ನ ಸಮುದಾಯಗಳ ಸಂಸ್ಕೃತಿಗಳೇ ಭಾರತದ ಜೀವಾಳ. ಈ ನಿಟ್ಟಿನಲ್ಲಿ ಕಾಂಗ್ರಸ್ ಎಲ್ಲರನ್ನು ಸಮಾನವಾಗಿ ಕಾಣುವ ನೀತಿ ಅನುಸರಿಸುತ್ತಿದೆ. ದೇಶ ಹಾಗೂ ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತಮ ಮಳೆ,ಬೆಳೆ ಆಗಬೇಕು.ವಿಶ್ವದಲ್ಲಿ ಶಾಂತಿ-ಸೌಹಾರ್ದತೆ ನೆಲೆ ನಿಲ್ಲಬೇಕು. ಈದ್‌ ಉಲ್ ಫಿತರ್‌ ಆಚರಣೆಯಿಂದ ಸಮಾಜದಲ್ಲಿ ಸೌಹಾರ್ದ, ಸಹನೆ,ಪರಸ್ಪರ ಪ್ರೀತಿ- ವಿಶ್ವಾಸ ವೃದ್ಧಿಯಾಗಬೇಕು.ಉಳ್ಳವರು ಬಡವರಿಗೆ ದಾನ,ಧರ್ಮ ಮಾಡಬೇಕು. ಸಮಸ್ತ ಮುಸಲ್ಮಾನ ಬಾಂದವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಇದನ್ನೂ ಓದಿ:  ನಾಲಿಗೆ ಹಿಡಿತದಲ್ಲಿ ಇರ್ಬೇಕು, #pratapsimha ವಿರುದ್ಧ ಪ್ರದೀಪ್ ಈಶ್ವರ್ ಕಿಡಿ #PradeepEshwar #shorts

ಈ ವೇಳೆ ಮಂಡಿಕಲ್ ಮತ್ತು ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮುನೇಗೌಡ, ಮುಖಂಡರಾದ ಕಮ್ಮಗುಟ್ಟಹಳ್ಳಿ ವೆಂಕಟೇಶ್, ಉಪ್ಪು ಕುಂಟ ವೆಂಕಟೇಶ್, ಮೆಹಬೂಬು,ಜಮೀರ್,ಕುಪೇಂದ್ರ, ಅರವಿಂದ್, ಮೋಹನ್ ರೆಡ್ಡಿ, ಎಸ್.ಪಿ.ಶ್ರೀನಿವಾಸ್,ಮಧು, ರಾಜಣ್ಣ, ಜಿ.ಉಮೇಶ್, ಶಂಕರ, ಮತ್ತಿತರರು ಇದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್