ನಂದಿಬೆಟ್ಟದ ಗೂಂಡಾಗಳು: ಕೋತಿಗಳ ಕಾಟಕ್ಕೆ ಪ್ರವಾಸಿಗರು ಹೈರಾಣು!

Kannadaprabha News, Ravi Janekal |   | Kannada Prabha
Published : Sep 15, 2025, 07:24 AM IST
Chikkaballapur Tourists troubled by monkeys in Nandi Hills

ಸಾರಾಂಶ

ನಂದಿ ಬೆಟ್ಟದಲ್ಲಿ ಕೋತಿಗಳ ಉಪಟಳ ಮಿತಿಮೀರಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸಿ ಆಹಾರ ಪದಾರ್ಥಗಳನ್ನು ಕಿತ್ತುಕೊಂಡು ಹೋಗುತ್ತಿವೆ. ಪ್ರವಾಸಿಗರು ಕೋತಿಗಳ ಉಪಟಳದಿಂದ ಹೈರಾಣಾಗಿದ್ದು, ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ (ಸೆ.15): ವಾರಾಂತ್ಯ ಮತ್ತು ಸಾರ್ವತ್ರಿಕ ರಜೆ ಬಂದ್ರೆ ಸಾಕು ಪ್ರವಾಸಿಗರೇ ದಂಡೇ ನಂದಿಗಿರಿಧಾಮಕ್ಕೆ ಹರಿದು ಬರುತ್ತದೆ. ಇಂಥ ಪ್ರವಾಸಿ ತಾಣದಲ್ಲಿ ಕೋತಿಗಳ ಉಪಟಳ ಮಿತಿಮೀರಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸಿ ಆಹಾರ ಪದಾರ್ಥಗಳನ್ನು ಕಿತ್ತುಕೊಂಡು ಹೋಗುತ್ತವೆ. ಈ ಕೋತಿಗಳ ಕಾಟಕ್ಕೆ ಪ್ರವಾಸಿಗರು ಹೈರಾಣಾಗಿದ್ದಾರೆ.

ತಿಂಡಿ-ತಿನಿಸು, ನೀರಿನ ಬಾಟಲ್‌ ಮತ್ತು ಐಸ್ ಕ್ರೀಂ ಹಿಡಿದಿರುವ ಪ್ರವಾಸಿಗರೇನಾದರೂ ಕಂಡರೆ ಸಾಕು ಕೋತಿಗಳು ಅವರ ಕೈಯಲ್ಲಿರೋ ತಿಂಡಿ-ತಿನಿಸು,ನೀರಿನ ಬಾಟಲ್‌ಮತ್ತು ಐಸ್ ಕ್ರೀಂ ಕಿತ್ತುಕೊಂಡು ಮರವೇರಿ ಸವಿಯುತ್ತವೆ. ಪ್ರವಾಸಿಗರ ಬ್ಯಾಗ್ ಕಂಡರೆ ಸಾಕು ಕಿತ್ತುಕೊಳ್ಳಲು ಹೊಂಚು ಹಾಕುತ್ತವೆ.

ಗೂಂಡಾಗಳಂತೆ ವರ್ತನೆ

ನಂದಿಬೆಟ್ಟದಲ್ಲಿ ಕೋತಿಗಳು ಗೂಂಡಾಗಳಂತೆ ವರ್ತಿಸುತ್ತಿವೆ ಎಂದು ಪ್ರವಾಸಿಗರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಎಲ್ಲೆಲ್ಲೂ ಗುಂಪು ಗುಂಪಾಗಿ ಕಾಣಿಸಿಕೊಳ್ಳುವ ಕೋತಿಗ ಸ್ಥಳಾಂತರಕ್ಕೆ ಸಂಬಂಧಪಟ್ಟೆ ಇಲಾಖೆ ಮುಂದಾಗುವಂತೆ ಒತ್ತಾಯಿಸಿದ್ದಾರೆ. ಪ್ರವಾಸಿಗರನ್ನು ಹಿಂಬಾಲಿಸುವ ಕೋತಿಗಳು ಕ್ಷಣಮಾತ್ರದಲ್ಲಿ ಪ್ರವಾಸಿಗರ ಕೈಯಲ್ಲಿರುವ ವಸ್ತುಗಳನ್ನು ಕಿತ್ತುಕೊಂಡು ಮಾಯವಾಗಿಬಿಡುತ್ತವೆ.

ನಂದಿಬೆಟ್ಟಕ್ಕೆ ಸಂತಸದಿಂದ ಸಮಯ ಕಳೆಯಲು ಬರುವ ಪ್ರವಾಸಿಗರು ಕೋತಿಗಳ ಉಪಟಳದಿಂದ ಹೈರಾಣಾಗಿ ಹೋಗಿದ್ದು ಕೋತಿಗಳ ಕಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಕೋತಿಗಳ ಕಾಟ ತಪ್ಪಿಸಿ

ನಗರದ ಕಾಂಕ್ರೀಟ್ ಕಾಡಿನಲ್ಲಿ , ವಾಹನಗಳ ಹೊಗೆ ಮತ್ತು ಜನರ ಜಂಜಾಟದಿಂದ ದೂರ ಹೋಗಲು, ಪ್ರಕೃತಿಯ ರಮ್ಯ ಮಡಿಲಲ್ಲಿ ಪರಿಸರದ ಸೊಬಗು ಸವಿಯೋಣ ವೆಂದು ನಂದಿ ಬೆಟ್ಟಕ್ಕೆ ಬಂದರೆ ಇಲ್ಲಿ ಕೋತಿಗಳ ಕಾಟ ಹೇಳತೀರದಾಗಿದೆ. ಸಂಬಂಧಿಸಿದವರು ಈ ಬಗ್ಗೆ ಕ್ರಮ ಕೈಗೊಂಡು ಪ್ರವಾಸಿಗರಿಗೆ ಕೋತಿ ಕಾಟದಿಂದ ಮುಕ್ತಿ ಕೊಡಿಸ ಬೇಕೆಂದು ಪ್ರವಾಸಿಗರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!