ಸಾರಿಗೆ ಸಚಿವರೇ ಇಲ್ನೋಡಿ! ಮುರಿದ ಸೀಟಿಗೆ ಟವೆಲ್ ಕಟ್ಟಿ ಕುಳಿತ ರೈತ, ಸೀಟುಗಳೇ ಹಿಂಗೆ, ಇನ್ನು ಇಂಜಿನ್ನು ಹೆಂಗೆ?

Published : Mar 13, 2026, 09:28 AM IST
Chikkamagaluru Farmer Sits on Broken Seat Using Towel Video Goes Viral

ಸಾರಾಂಶ

ಚಿಕ್ಕಮಗಳೂರು-ಮೈಸೂರು ಮಾರ್ಗದ ಸರ್ಕಾರಿ ಬಸ್ಸಿನಲ್ಲಿ ಮುರಿದುಬಿದ್ದಿದ್ದ ಸೀಟಿಗೆ ರೈತರೊಬ್ಬರು ತಮ್ಮ ಟವೆಲ್ ಬಳಸಿ ಆಸರೆ ಮಾಡಿಕೊಂಡು ಪ್ರಯಾಣಿಸಿದ್ದಾರೆ. ಈ ಘಟನೆಯು ಸಾರಿಗೆ ಇಲಾಖೆಯ ಬಸ್‌ಗಳ ಕಳಪೆ ನಿರ್ವಹಣೆ ಮತ್ತು ಶಕ್ತಿ ಯೋಜನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

ಚಿಕ್ಕಮಗಳೂರು (ಮಾ.13): ಸರ್ಕಾರಿ ಬಸ್ಸಿನ ಸೀಟು ಮುರಿದು ಬಿದ್ದಿದ್ದರೂ, ಎದೆಗುಂದದ ರೈತನೊಬ್ಬ ಮಾಡಿದ ಅನಾಹುತ ಐಡಿಯಾವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಚಿಕ್ಕಮಗಳೂರು ಡಿಪೋಗೆ ಸೇರಿದ ಮೈಸೂರು ಮಾರ್ಗದ ಬಸ್ಸಿನಲ್ಲಿ ಈ ವಿಚಿತ್ರ ಪ್ರಸಂಗ ನಡೆದಿದೆ. ಬಸ್ಸಿನ ಸೀಟು ಎಷ್ಟು ಮುರಿದಿದೆ ಎಂದರೆ ಅದರ ಮೇಲೆ ಕುಳಿತರೆ ಸೀಟು ಸಮೇತ ಕೆಳಗೆ ಕುಸಿದು ಬೀಳುವುದು ಗ್ಯಾರಂಟಿ. ಹೀಗಾಗಿ ಬಸ್ ಹತ್ತಿದ ಯಾವ ಪ್ರಯಾಣಿಕರೂ ಆ ಸೀಟಿನ ಮೇಲೆ ಕೂರುವ ಸಾಹಸ ಮಾಡಿರಲಿಲ್ಲ.

ರೈತನ ಐಡಿಯಾ ಮಸ್ತ್

ಚಿಕ್ಕಮಗಳೂರು-ಹಾಸನ ಮಾರ್ಗ ಮಧ್ಯೆ ಬಸ್ ಚಲಿಸುತ್ತಿದ್ದಾಗ ರೈತರೊಬ್ಬರು ಬಸ್ ಹತ್ತಿದ್ದಾರೆ. ಸೀಟು ಮುರಿದಿರುವುದನ್ನು ಕಂಡ ಅವರು ಬೈದುಕೊಳ್ಳದೆ, ಬೇರೆ ಸೀಟು ನೋಡದೆ ತಮ್ಮ ಬಳಿಯಿದ್ದ ಟವೆಲ್ ಅನ್ನು ಸೀಟಿನ ರಾಡ್‌ಗೆ ಭದ್ರವಾಗಿ ಕಟ್ಟಿ, ಅದನ್ನೇ ಆಸರೆಯಾಗಿಸಿಕೊಂಡು ಆರಾಮವಾಗಿ ಕುಳಿತು ಪ್ರಯಾಣಿಸಿದ್ದಾರೆ.

ತಾನು ಕೂರುವುದಷ್ಟೇ ಅಲ್ಲದೆ, ಮುಂದಿನ ಪ್ರಯಾಣಿಕರಿಗೂ ಅನುಕೂಲವಾಗಲಿ ಎಂದು ತಾವು ಕಟ್ಟಿದ ಟವೆಲ್ ಅನ್ನು ಬಿಚ್ಚದೆ ಹಾಗೆಯೇ ಬಿಟ್ಟು ಇಳಿದು ಹೋಗುವ ಮೂಲಕ ರೈತ ತನ್ನ ದೊಡ್ಡಗುಣ ಮೆರೆದಿದ್ದಾರೆ.

ಪ್ರಯಾಣಿಕರ ಆಕ್ರೋಶ ಮತ್ತು ವ್ಯಂಗ್ಯ:

ಈ ದೃಶ್ಯವನ್ನು ಕಂಡ ಸಹ ಪ್ರಯಾಣಿಕರು ರಾಜ್ಯ ಸರ್ಕಾರದ 'ಶಕ್ತಿ ಯೋಜನೆ'ಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. 'ಪುಕ್ಕಟ್ಟೆ ಪ್ರಯಾಣವೇನೋ ಸರಿ, ಆದರೆ ಕನಿಷ್ಠ ಕುಳಿತುಕೊಳ್ಳಲು ಸೀಟುಗಳೂ ಗಟ್ಟಿ ಇಲ್ಲದಂತಾಗಿರುವುದು ಶಕ್ತಿ ಯೋಜನೆಯ ಅಡ್ಡಪರಿಣಾಮವೇ?' ಎಂದು ಪ್ರಯಾಣಿಕರು ವ್ಯಂಗ್ಯವಾಡಿದ್ದಾರೆ. ಮಗದೊಬ್ಬರು, 'ಸೀಟುಗಳೇ ಹೀಗಿರುವಾಗ, ಇನ್ನು ಇಂಜಿನ್ ಸ್ಥಿತಿ ಹೇಗಿದೆಯೋ ಏನೋ?' ಅಂತ ಆತಂಕ ವ್ಯಕ್ತಪಡಿಸಿದರೆ, ಇನ್ನೊಬ್ಬ 'ಬಸ್ ಗುರಿ ತಲುಪುವವರೆಗೂ ಎಲ್ಲೂ ಕೆಟ್ಟು ನಿಲ್ಲದಿದ್ದರೆ ಅಷ್ಟೇ ಸಾಕಪ್ಪ' ಎಂದಿದ್ದಾರೆ.

ಸದ್ಯಕ್ಕೆ ಈ ಮುರಿದ ಸೀಟು ಮತ್ತು ರೈತನ ಟವೆಲ್ ಆಸರೆಯ ಫೋಟೋಗಳು ವೈರಲ್ ಆಗುತ್ತಿದ್ದು, ಸಾರಿಗೆ ಇಲಾಖೆಯ ಬಸ್‌ಗಳ ನಿರ್ವಹಣೆಯ ಬಗ್ಗೆ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪ್ಪ ಇಲ್ಲದ ಕಂದನಿಗೆ ತಾಯಿ ಆಸೆಯಂತೆ ಹೆಸರಿಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ಅಸ್ಸಾಂನಲ್ಲಿ ಆಪರೇಷನ್ ಕಮಲ ಭೀತಿ: ಬೆಂಗಳೂರಿನಲ್ಲಿ ಬೀಡು ಬಿಟ್ಟ ಅಸ್ಸಾಂನ 12 ಕಾಂಗ್ರೆಸ್ ಶಾಸಕರು