
ಚಿಕ್ಕಮಗಳೂರು (ನ.19): ದತ್ತಜಯಂತಿ ಉತ್ಸವದ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ ಮತ್ತು ಗಾಳಿಕೆರೆ ಮಾಣಿಕ್ಯಧಾರ ಭಾಗಗಳಿಗೆ ಡಿಸೆಂಬರ್ 1 ರಿಂದ 4 ರವರೆಗೆ ಸತತ 4 ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 2, 3 ಮತ್ತು 4 ರಂದು ದತ್ತಪೀಠದಲ್ಲಿ ಭರ್ಜರಿ ದತ್ತಜಯಂತಿ ಸಂಭ್ರಮ ನಡೆಯಲಿದ್ದು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಭಕ್ತರ ಸುರಕ್ಷತೆ, ಸಂಚಾರ ನಿಯಂತ್ರಣ ಮತ್ತು ಉತ್ಸವದ ಸುಗಮ ನಿರ್ವಹಣೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ತಿಳಿಸಿದ್ದಾರೆ.
ಡಿಸೆಂಬರ್ 5 ರ ಬೆಳಗ್ಗೆ 10 ಗಂಟೆಯ ನಂತರವೇ ಈ ಎಲ್ಲಾ ತಾಣಗಳು ಪ್ರವಾಸಿಗರಿಗೆ ಮತ್ತೆ ಮುಕ್ತವಾಗಲಿವೆ.ಈ ಅವಧಿಯಲ್ಲಿ ಯಾವುದೇ ಪ್ರವಾಸಿಗರು ಈ ಭಾಗಕ್ಕೆ ಬರುವ ಪ್ರಯತ್ನ ಮಾಡದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ವೀಕೆಂಡ್ ಅಂತಾ ಪ್ರವಾಸಕ್ಕೆ ಬಂದರೆ ನಿರಾಸೆಯಿಂದ ವಾಪಸ್ ಹೋಗುವುದು ಪಕ್ಕ. ಪ್ರವಾಸಿಗರು ತಮ್ಮ ಯೋಜನೆಗಳನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ