ಕಾಡು ರಕ್ಷಿಸುತ್ತೇವೆಂದು ಬಂದ ಎನ್‌ಜಿಒ ಸದಸ್ಯರೇ ಕಡವೆ ಬೇಟೆಯಾಡಿ ಮಾಂಸ ತಿಂದ್ರು

Published : Aug 21, 2023, 05:13 PM IST
ಕಾಡು ರಕ್ಷಿಸುತ್ತೇವೆಂದು ಬಂದ ಎನ್‌ಜಿಒ ಸದಸ್ಯರೇ ಕಡವೆ ಬೇಟೆಯಾಡಿ ಮಾಂಸ ತಿಂದ್ರು

ಸಾರಾಂಶ

ಅರಣ್ಯ ಹಾಗೂ ಕಾಡುಪ್ರಾಣಿಗಳನ್ನು ರಕ್ಷಣೆ ಮಾಡುತ್ತೇವೆಂದು ಬಂದ ಎನ್‌ಜಿಒ ತಂಡದ ಸದಸ್ಯರೇ ಕಾಡಿನ ಕಡವೆಯನ್ನು ಬೇಟೆಯಾಡಿ ಮಾಂಸದೂಟದ ಪಾರ್ಟಿ ಮಾಡಿದ್ದಾರೆ.

ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿಕ್ಕಮಗಳೂರು (ಆ.21): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟು ಅಗಾಧವಾದ ಅರಣ್ಯ ಸಂಪತ್ತು ಇದಿಯೋ ಅಷ್ಟೇ ವನ್ಯಜೀವಿಗಳ ಆಶ್ರಯ ತಾಣವೂ ಆಗಿದೆ. ಇಂತಹ ವನ್ಯಜೀವಿಗಳಿಗೆ ಇದೀಗ ಪ್ರವಾಸಿಗರಿಂದ ಅಪತ್ತು ಎದುರಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಅಕ್ರಮವಾಗಿ ಶಿಕಾರಿ ಮಾಡಿ ವನ್ಯಜೀವಿಗಳ ಹತ್ಯೆ ಮಾಡಲಾಗುತ್ತಿದೆ. ಅದರಲ್ಲೂ ಕಾಡು ಹಾಗೂ ಕಾಡು ಪ್ರಾಣಿಗಳನ್ನ ಉಳಿಸುತ್ತೇವೆ ಎನ್ನುವ ಎನ್.ಜಿ.ಓ. ತಂಡದವರೇ ಮೀಸಲು ಅರಣ್ಯದಲ್ಲಿ ಕಡವೆಯನ್ನ ಬೇಟೆಯಾಡಿ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಆಧಾರದ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದಾಗ ಬಾಡೂಟ ಮಾಡಲು ಸಿದ್ಧವಾಗಿದ್ದ 6 ಮಂದಿಯನ್ನು ವಶಕ್ಕೆ ಪಡೆದ್ದಾರೆ. 

ಚಿಕ್ಕಮಗಳೂರು ತಾಲೂಕಿನ ಹುಲಿಕಾನು ಸಂಗಮ ಕಾಫಿ ತೋಟದಲ್ಲಿ ಕಡವೆ ಶಿಕಾರಿ ಮಾಡಿ ಎನ್.ಜಿ.ಓ. ತಂಡದ ಸದಸ್ಯರು ಕಳ್ಳಬೇಟೆ ಮಾಡಿ ಮೋಜು-ಮಸ್ತಿಯಿಂದ ಬಾಡೂಟ ನಡೆಸಿದ್ದಾರೆ. ಮುತ್ತೋಡಿ ಸಮೀಪದ ಮೇಲಿನಹುಲುವತ್ತಿ ಗ್ರಾಮದ ಸಂಗಂ ಕಾಫಿ ತೋಟದ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅಲ್ಲೇ ಬಾಡೂಟ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ಮಾಡಿ ಮೊಹಮ್ಮದ್ ಶಕೀಲ್ ಸೇರಿದಂತೆ ಒಟ್ಟು 6 ಮಂದಿಯನ್ನು ಬಂಧಿಸಿ 8 ಕೆ.ಜಿ.ಕಡವೆ ಮಾಂಸ ಮತ್ತು ಒಂದು ಬಂದೂಕು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಅವರು ಅಡುಗೆಯ ತಪಾಸಣೆ ಕೂಡ ಮಾಡಿದ್ದಾರೆ ಎಂದು ಹೇಳಲಾಗಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಎಳ್ಳುನೀರು ಬಿಟ್ಟ ಕಾಂಗ್ರೆಸ್‌: ಹಳೆ ಶಿಕ್ಷಣ ನೀತಿಗೆ ಜಾರಿಗೆ ಸಮಿತಿ ರಚನೆ

ಅಡುಗೆ ಮಾಡುತ್ತಿರುವಾಗ ಅಧಿಕಾರಿಗಳು ದಾಳಿ: ಮಂಗಳೂರು , ಬೆಂಗಳೂರು ಮೂಲದ ಪ್ರವಾಸಿಗರು ಜಿಲ್ಲೆಯ ಪ್ರವಾಸಕ್ಕೆ ಬಂದ ವೇಳೆಯಲ್ಲಿ ಅರಣ್ಯಕ್ಕೆ ಹೊಂದಿಕೊಂಡಿರುವ ಕಾಫಿ ತೋಟದಲ್ಲಿ ಅಕ್ರಮವಾಗಿ ಕಡವೆ ಶಿಕಾರಿ ಮಾಡಿ ಮಾಂಸದೂತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಕಡವೆ ಮಾಂಸ ಸರಬರಾಜಾಗಿದ್ದು, ಅಲ್ಲೇ ಬೇಯಿಸಿ ಅಡುಗೆ ಮಾಡುತ್ತಿರುವಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ, ಸ್ಥಳದಲ್ಲಿದ್ದ ಎನ್.ಜಿ.ಓ. ತಂಡದ ಸದಸ್ಯರನ್ನ ರಕ್ಷಿಸಿ ಕೇವಲ ಕಡವೆ ಮಾಂಸ ಇಟ್ಟುಕೊಂಡಿದ್ದ ಶಕೀಲ್ ನನ್ನ ಮಾತ್ರ ಬಂಧಿಸಲಾಗಿದೆ ಎಂದು ಸ್ಥಳಿಯರುಆರೋಪಿಸಿದ್ದಾರೆ.

ಸೂಕ್ತ ತನಿಖೆಗೆ ಸ್ಥಳೀಯರಿಂದ ಒತ್ತಾಯ:  ಸುಮಾರು 25 ಕೆ.ಜಿ.ಗೂ ಅಧಿಕ ಕಡವೆ ಮಾಂಸದಲ್ಲಿ ಪಾರ್ಟಿ, ಬಾಡೂಟಕ್ಕೂ ಸರಬರಾಜು  ಮಾಡಲಾಗಿದೆ. ಉಳಿದ 8 ಕೆ.ಜಿ.ಹಸಿ ಮಾಂಸ ಮಾತ್ರ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಈ ಕಡವೆ ಬೇಟೆ, ಬಾಡೂಟ, ಮೋಜು-ಮಸ್ತಿ ಹಾಗೂ ಅಕ್ರಮ ಚಟುವಟಿಕೆ ಕುರಿತು ಸಮಗ್ರ ತನಿಖೆಯಾಗಬೇಕು. ಯಾರೇ ಎಷ್ಟೇ ಪ್ರಭಾವಿಗಳಿದ್ದರೂ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ನಾಗರ ಪಂಚಮಿ ಪೂಜೆಗೆ ಮೂಲ ನಾಗನ ಪೂಜೆಯೇ ಶ್ರೇಷ್ಠ: ಮೂಲ ನಾಗ ಎಲ್ಲಿದೆ ಗೊತ್ತಾ?

ರೆಸಾರ್ಟ್ ಮಾಲೀಕರಿಂದ ಅಕ್ರಮವಾಗಿ ಕಾಡು ಪ್ರಾಣಿಗಳ ಶಿಕಾರಿ: ಕಾಡಂಚಿನ ಗ್ರಾಮಗಳಲ್ಲಿ ಅತಿ ಹೆಚ್ಚು ಹೋಂಸ್ಟೇ ರೆಸಾರ್ಟ್ ಗಳಿದ್ದು ಅಲ್ಲಿ ರಾತ್ರಿಯ ವೇಳೆಯಲ್ಲಿ ಅಕ್ರಮವಾದ ಚಟುವಟಿಕೆಗಳು ನಡೆಯುತ್ತಿದೆ ಎಂದು ಸ್ಥಳೀಯರು ಗಂಭೀರವಾದ ಆರೋಪ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಬರುವ ಪ್ರವಾಸಿಗರಿಗೆ ಆತಿಥ್ಯ ನೀಡುವಂಥ ಕೆಲವೊಂದು ರೆಸಾರ್ಟ್ ನ ಮಾಲೀಕರಿಂದ ಅಕ್ರಮವಾಗಿ ಕಾಡು ಪ್ರಾಣಿಗಳ ಶಿಕಾರಿ ಮಾಡುವ ಆರೋಪವನ್ನು ಸ್ಥಳೀಯರು ಮಾಡಿದ್ದು ಈ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್