ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ನಕಲಿ ಬುರುಡೆ ಪ್ರದರ್ಶನ; ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಟಾಂಗ್!

Published : Sep 06, 2025, 10:14 PM IST
Chikmagalur Ganesh Visarjan 2025

ಸಾರಾಂಶ

ಚಿಕ್ಕಮಗಳೂರಿನಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣ ಖಂಡಿಸಿ ನಕಲಿ ಬುರುಡೆ ಪ್ರದರ್ಶಿಸಲಾಯಿತು. ಷಡ್ಯಂತ್ರದ ವಿರುದ್ಧ ಘೋಷಣೆ ಕೂಗಿ, ಧರ್ಮಸ್ಥಳದ ಪವಿತ್ರತೆ ಕಾಪಾಡುವ ಸಂದೇಶ ಸಾರಿದರು.

ಚಿಕ್ಕಮಗಳೂರು(ಸೆ.6): ಚಿಕ್ಕಮಗಳೂರು ನಗರದಲ್ಲಿ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಮೆರವಣಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾದ್ವಾರದಿಂದ ಆರಂಭವಾಗಿ ಭವ್ಯವಾಗಿ ನಡೆಯಿತು.

ಧರ್ಮಸ್ಥಳ ಬುರುಡೆ ಪ್ರಕರಣದ ರೂವಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲು ಈ ಮೆರವಣಿಗೆಯಲ್ಲಿ ನಕಲಿ ಬುರುಡೆ-ಅಸ್ಥಿಪಂಜರದ ಮಾದರಿಯ ಗೊಂಬೆಯನ್ನು ಪ್ರದರ್ಶಿಸಲಾಯಿತು. ಈ ಗೊಂಬೆಯ ಮೂಲಕ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದವರಿಗೆ ಹಿಂದೂ ಮಹಾಸಭಾದ ಕಾರ್ಯಕರ್ತರು ಟಾಂಗ್ ನೀಡಿದರು.

ಮೆರವಣಿಗೆಯು ಧರ್ಮಸ್ಥಳದ ಪವಿತ್ರತೆಯನ್ನು ಕಾಪಾಡುವ ಸಂದೇಶವನ್ನು ಸಾರುತ್ತಾ, ಷಡ್ಯಂತ್ರಕಾರರ ವಿರುದ್ಧ ಘೋಷಣೆಗಳೊಂದಿಗೆ ಮುನ್ನಡೆಯಿತು. ಹಿಂದೂ ಮಹಾಸಭಾದ ಕಾರ್ಯಕರ್ತರು ಈ ಸಂದರ್ಭದಲ್ಲಿ ಧರ್ಮಸ್ಥಳದ ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ತೋರಿಸಿದರು.

ಬುರುಡೆ ಪ್ರಕರಣವನ್ನು ದುರುದ್ದೇಶದಿಂದ ಎಳೆದುತಂದಿದ್ದಾರೆ. ಈ ಪ್ರಕರಣದ ಹಿಂದಿನ ಸತ್ಯ ಸದ್ಯದಲ್ಲೇ ಬಯಲಾಗಲಿದೆ ಎಂದ ಕಾರ್ಯಕರ್ತರು. ಆ ನಿಟ್ಟಿನಲ್ಲಿ ಜನರಿಗೆ ತಿಳಿಸುವ ಪ್ರಯತ್ನ ನಡೆಯುತ್ತದೆ ಎಂದರು. ಮೆರವಣಿಗೆಯಲ್ಲಿ ನಕಲಿ ಬುರುಡೆ, ಅಸ್ಥಿಪಂಜರ ಗಮನ ಸೆಳೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಈ ಮೆರವಣಿಗೆಯಲ್ಲಿ ಗಣಪತಿಯ ಭವ್ಯ ವಿಗ್ರಹದ ಜೊತೆಗೆ, ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸುವ ಘೋಷಣೆಗಳು ಮೊಳಗಿದವು. ಈ ಕಾರ್ಯಕ್ರಮವು ಜನರಲ್ಲಿ ತೀವ್ರ ಕುತೂಹಲವನ್ನು ಮೂಡಿಸಿದ್ದು, ಧರ್ಮಸ್ಥಳದ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮಹಾಸಭಾದ ಕಾರ್ಯಕರ್ತರು ಒಟ್ಟಾಗಿ ಧ್ವನಿ ಎತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!