ವಿವಾದಿತ ಪ್ರದೇಶದಿಂದ ಹಿಂದೆ ಸರಿದ ಚೀನಾ: ಡ್ರ್ಯಾಗನ್‌ ಟೆಂಟ್‌ಗಳೂ ಸ್ಥಳಾಂತರ!

Published : Jul 06, 2020, 03:19 PM ISTUpdated : Jul 06, 2020, 03:36 PM IST
ವಿವಾದಿತ ಪ್ರದೇಶದಿಂದ ಹಿಂದೆ ಸರಿದ ಚೀನಾ: ಡ್ರ್ಯಾಗನ್‌ ಟೆಂಟ್‌ಗಳೂ ಸ್ಥಳಾಂತರ!

ಸಾರಾಂಶ

ಭಾರತ ಹಾಗೂ ಚೀನಾ ಗಡಿಯಲ್ಲಿರುವ ಲಡಾಖ್​ನ ಗಾಲ್ವಾನ್​ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವಿನ ಹಿಂಸಾಚಾರ| ಲಡಾಖ್​ನಲ್ಲಿರುವ ಗಾಲ್ವಾನ್ ಕಣಿವೆಯಿಂದ ಹಿಂದೆ ಸರಿದ ಚೀನಾ ಸೈನಿಕರು| ಟೆಂಟ್‌ಗಳ ಸ್ಥಳಾಂತರ 

ಲಡಾಖ್(ಜು.06): ಭಾರತ ಹಾಗೂ ಚೀನಾ ಗಡಿಯಲ್ಲಿರುವ ಲಡಾಖ್​ನ ಗಾಲ್ವಾನ್​ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವಿನ ಹಿಂಸಾಚಾರ ಸಂಘರ್ಷ ನಡೆದಿದ್ದು, ಈ ವೇಳೆ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬೆನ್ನಲ್ಲೇ ಗಡಿಯಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದ, ಯುದ್ಧಕ್ಕೆ ಬೇಕಾದ ಸಿದ್ಧತೆಗಳು ನಡೆದಿದ್ದವು. ಅಲ್ಲದೇ ಚೀನಾದ 59 Appಗಳನ್ನು ಬ್ಯಾನ್‌ ಮಾಡುವ ಮೂಲಕ ಡಿಜಿಟಲ್ ಸ್ಟ್ರೈಕ್ ಮಾಡಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಸದ್ಯ ವಿವಾದಿತ ಗಾಲ್ವಾನ್​ ಕಣಿವೆಯ ಪ್ರದೇಶ ಮತ್ತಿತರೆ ಎರಡು ಪ್ರದೇಶಗಳಿಂದ ಚೀನಾ ಸೇನೆ ಹಿಂದೆ ಸರಿದಿದೆ. ಈ ಮೂಲಕ ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಕೊಂಚ ಮಟ್ಟಿಗೆ ಬಗೆಹರಿದಂತಾಗಿದೆ.

ಈಗ ಭೂತಾನ್‌ ಜೊತೆಗೂ ಚೀನಾ ಗಡಿ ಜಗಳ!

 ಇಂದು ಬೆಳಗ್ಗೆ ಲಡಾಖ್​ನಲ್ಲಿರುವ ಗಾಲ್ವಾನ್ ಕಣಿವೆಯಿಂದ ಚೀನೀ ಸೈನಿಕರು ಹಿಂದೆ ಸರಿದಿದ್ದು, ಇಲ್ಲಿ ಅವರು ಹಾಕಿದ್ದ ಟೆಂಟ್‌ಗಳನ್ನೂ ಸ್ಥಳಾಂತರ ಮಾಡಿರುವುದಾಗಿ ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಆದರೆ ಚೀನೀ ಸೇನೆ ನಿಜಕ್ಕೂ ಹಿಂದೆ ಸರಿದಿದಾ? ಅಥವಾ ಈ ಹೆಜ್ಜೆ ಹಿಂದೆ ಬೇರಾವುದಾದರೂ ಉದ್ದೇಶವಿದೆಯಾ ಕಾದು ನೋಡಬೇಕಷ್ಟೇ. ಇನ್ನು ಗಾಲ್ವಾನ್​ ಕಣಿವೆಯ ಗಡಿಯಲ್ಲಿ ಗಲಾಟೆ ನಡೆದ ಬಳಿಕ ಚೀನಾ ತನ್ನ ಗಡಿಯಲ್ಲಿ ಹೆಚ್ಚಿನ ಸೇನೆಯನ್ನು ನಿಯೋಜಿಸಿದ್ದು, ವಿವಾದಿತ ಪ್ರದೇಶಗಳಾದ ಗಾಲ್ವಾನ್​ ಕಣಿವೆ, ಗೋಗ್ರಾದಲ್ಲಿ 2 ತಿಂಗಳಿಂದ ಚೀನಾ ಸೇನೆ ಬೀಡುಬಿಟ್ಟಿತ್ತು ಎಂಬುವುದು ಉಲ್ಲೇಖನೀಯ.

ಗಡಿಯ ಬಿಕ್ಕಟ್ಟಿನ ಬಗ್ಗೆ ಈ ಮೊದಲು ಚೀನಾ ಮತ್ತು ಭಾರತದ ಸೇನಾ ಕಮಾಂಡರ್​ಗಳ ಮಟ್ಟದಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ಗಾಲ್ವಾನ್​ ಕಣಿವೆಯಿಂದ ಎರಡೂ ದೇಶಗಳ ಸೇನೆಯನ್ನು ಹಿಂಪಡೆಯುವ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಈ ವೇಳೆ ಚೀನಾ ತನ್ನ ಸೇನೆಯನ್ನು ವಾಪಾಸ್​ ಕರೆಸಿಕೊಂಡರೆ ಭಾರತ ಕೂಡ ವಿವಾದಿತ ಪ್ರದೇಶದಿಂದ ಸೇನೆಯನ್ನು ಹಿಂಪಡೆಯುವುದಾಗಿ ತಿಳಿಸಿತ್ತು.

ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಖುದ್ದು ಲಡಾಖ್‌ಗೆ ತೆರಳಿ ಸೈನಿಕರೊಂದಿಗೆ ಮಾತನಾಡಿ ಬಂದ ಮೂರು ದಿನಗಳಲ್ಲೇ ಚೀನಾ ಸೈನಿಕರು ಈ ಹೆಜ್ಜೆ ಇರಿಸಿದ್ದಾರೆ ಎಂಬುವುದು ಗಮನಾರ್ಹ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್