ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ರಮ್ಯಾ.ಎಸ್ ವರ್ಗಾವಣೆ; ಕೆಲವೇ ಗಂಟೆಗಳಲ್ಲಿ ಆದೇಶ ವಾಪಸ್ ಪಡೆದ ಸರ್ಕಾರ!

Published : Jul 03, 2026, 08:40 PM IST
Chitradurga DC Venkatesh and Ramya S Transfer

ಸಾರಾಂಶ

ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಎಸ್. ರಮ್ಯಾ ಅವರ ವರ್ಗಾವಣೆ ಆದೇಶವನ್ನು ಕೆಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಇದೀಗ ವರ್ಗಾವಣೆ ಹಿಂಪಡೆಯಲಾಗಿದ್ದು, ಟಿ. ವೆಂಕಟೇಶ್ ಅವರೇ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ.

ಚಿತ್ರದುರ್ಗ (ಜು.03): ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (Kavika) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಎಸ್. ರಮ್ಯಾ (Ramya S) ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ(Chitradurga DC) ವರ್ಗಾವಣೆ ಮಾಡಿದ ಕೆಲವೇ ಗಂಟೆಗಳಲ್ಲಿರಾಜ್ಯ ಸರ್ಕಾರ ಟ್ರಾನ್ಸ್‌ಫರ್ ರದ್ದುಗೊಳಿಸಿ (Order Cancelled) ಆದೇಶವನ್ನು ವಾಪಸ್ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಅವರು ಕವಿಕಾ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಮುಂದುವರೆಯಲಿದ್ದಾರೆ.

ಏನಿದು ಘಟನೆ?

ಜುಲೈ 3ರಂದು ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (Kavika) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ರಮ್ಯ ಎಸ್. (IAS: 2013) ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆ (Notification) ಹೊರಡಿಸಲಾಗಿತ್ತು.

ಆದೇಶ ರದ್ದಾಗಲು ಕಾರಣವೇನು?

ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮತ್ತೊಂದು ಪತ್ರ ಹೊರಬಿದ್ದಿದೆ. ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision - SSR) ಕಾರ್ಯ ಜಾರಿಯಲ್ಲಿದೆ. ಭಾರತ ಚುನಾವಣಾ ಆಯೋಗದ (Election Commission of India) ಕಟ್ಟುನಿಟ್ಟಿನ ನಿರ್ದೇಶನದಂತೆ, ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ನಡೆಯುತ್ತಿರುವಾಗ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು (ಜಿಲ್ಲಾ ಚುನಾವಣಾಧಿಕಾರಿಗಳು) ಆಯೋಗದ ಪೂರ್ವ ಅನುಮತಿ ಇಲ್ಲದೆ ವರ್ಗಾವಣೆ ಮಾಡುವಂತಿಲ್ಲ.

ಚಿತ್ರದುರ್ಗ ಜಿಲ್ಲಾಧಿಕಾರಿಗಳ ವರ್ಗಾವಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಭಾರತ ಚುನಾವಣಾ ಆಯೋಗದ ಸಹಮತಿ (Concurrence) ಪಡೆದಿರಲಿಲ್ಲ. ಇದು ಆಯೋಗದ ನಿಯಮಗಳ ನೇರ ಉಲ್ಲಂಘನೆಯಾದ ಕಾರಣ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು. ಈ ಹಿನ್ನೆಲೆಯಲ್ಲಿ, ಸರ್ಕಾರವು ತನ್ನ ವರ್ಗಾವಣೆ ಆದೇಶವನ್ನು ಹಿಂಪಡೆದಿದೆ.

ಪರಿಣಾಮವೇನು?

ಈ ದಿಢೀರ್ ಬೆಳವಣಿಗೆಯಿಂದಾಗಿ ಟಿ. ವೆಂಕಟೇಶ್ ಅವರೇ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ. ರಮ್ಯ ಎಸ್. ಅವರಿಗೆ ಅಧಿಕಾರ ವಹಿಸಿಕೊಡದಂತೆ (Relieving) ಸರ್ಕಾರ ಸೂಚನೆ ನೀಡಿದೆ. ಆಡಳಿತಾತ್ಮಕವಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಯಲ್ಲಿ ನಡೆದ ಈ ಎಡವಟ್ಟು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗದ ನಿಯಮಗಳನ್ನು ಗಮನಿಸದೆಯೇ ಸರ್ಕಾರ ಈ ನಿರ್ಧಾರ ಕೈಗೊಂಡಿತೇ ಎಂಬ ಪ್ರಶ್ನೆಗಳು ಎದ್ದಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂಪನಿ ಸಿಇಒ ನೀಡಿದ ಉದ್ಯೋಗ ಆಫರ್ ತಿರಸ್ಕರಿಸಿದ ಬೆಂಗಳೂರಿಗ, ರಿಜೆಕ್ಟ್ ಹಿಂದಿನ SORRY ಘಟನೆ
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪಗೆ ಬಿಡದ ಕಾನೂನು ಸಂಕಷ್ಟ; ಆಗಿದ್ದೇನು ಗೊತ್ತಾ?