
ಚಿತ್ರದುರ್ಗ (ಅ.21): ಅಜ್ಜಿಗೆ ಕರೆ ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನೋರ್ವ ಪುಟ್ಟ ವಿದ್ಯಾರ್ಥಿಗೆ ಒದ್ದು ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಂಸ್ಕೃತ ವೇದ ವಸತಿ ಶಾಲೆ ವಿದ್ಯಾರ್ಥಿ ತರುಣ್(9) ಹಲ್ಲೆಗೊಳಗಾದ ವಿದ್ಯಾರ್ಥಿ. ವೀರೇಶ್ ಹಿರೇಮಠ್, ಹಲ್ಲೆ ಮಾಡಿದ ಮುಖ್ಯ ಶಿಕ್ಷಕ. ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಪತ್ತೆ ಆಗಿರುವ ಶಿಕ್ಷಕ ವಿರೇಶ್.
ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ನಾಯಕನಹಟ್ಟಿ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ಉತ್ತರ ಕರ್ನಾಟಕ ಮೂಲದ 9 ವರ್ಷದ ತರುಣ್ ಎಂಬ ವಿದ್ಯಾರ್ಥಿ ವಿದ್ಯಾಭ್ಯಾಸಕ್ಕೆ ಮಾಡುತ್ತಿದ್ದಾನೆ. ಆದರೆ ಇತ್ತೀಚೆಗೆ ತರುಣ್ ತನ್ನ ಅಜ್ಜಿಗೆ ಫೋನ್ ಮಾಡಿದ್ದನ್ನು ತಿಳಿದುಕೊಂಡ ಮುಖ್ಯ ಶಿಕ್ಷಕ ವಿರೇಶ್ ಹಿರೇಮಠ್ ಕೋಪಗೊಂಡು, ಅವನ ಮೇಲೆ ಕಾಲಿನ ಒಡ್ಡಿ ವಿಕೃತ ಕ್ರೌರ್ಯ ಮೆರೆದಿದ್ದಾರೆ. ಅಲ್ಲದೇ 'ಬೇರೆ ನಂಬರಿನಿಂದ ಕರೆ ಮಾಡಿದರೆ ಸುಮ್ಮನೆ ಬಿಡಲ್ಲ' ಎಂದು ಬೆದರಿಸಿದ್ದಾನೆ. ಈ ವೇಳೆ ಪುಟ್ಟ ಬಾಲಕನನ್ನ ನೆಲಕ್ಕೆ ಕೆಡವಿ ಕಾಲಿನಿಂದ ಹೊಟ್ಟೆಯ ಮೇಲೆ ಒದೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಬಾಲಕನ ಮೇಲೆ ಶಿಕ್ಷಕ ಅಮಾನವೀಯವಾಗಿ ವರ್ತಿಸಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಶಿಕ್ಷಕ ನಾಪತ್ತೆಯಾಗಿದ್ದಾನೆ. ಘಟನೆ ಬಗ್ಗೆ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ಅವರು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ವಿರೇಶ್ ಹಿರೇಮಠ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಾಯಕನಹಟ್ಟಿ ಪೊಲೀಸರು. ಇದೀಗ ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ