ಲಾಕ್‌ಡೌನ್‌: 'ಬೆಂಗಳೂರಿನಲ್ಲಿ ಎಲ್ಲ ವಲಯದ ಕಾರ್ಯಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ'

Kannadaprabha News   | Asianet News
Published : Jul 16, 2020, 08:47 AM ISTUpdated : Jul 16, 2020, 10:19 AM IST
ಲಾಕ್‌ಡೌನ್‌: 'ಬೆಂಗಳೂರಿನಲ್ಲಿ ಎಲ್ಲ ವಲಯದ ಕಾರ್ಯಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ'

ಸಾರಾಂಶ

ಕೆಲ ಚಟುವಟಿಕೆಗೆ ತಡೆ ನೀಡಲು ಆಗಲ್ಲ: ನಗರ ಪೊಲೀಸ್‌ ಆಯುಕ್ತ ಎಸ್‌.ಭಾಸ್ಕರ್‌ ರಾವ್‌| ಬೆಂಗಳೂರಿನಲ್ಲಿ ಎಲ್ಲ ವಲಯದ ಕಾರ್ಯಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ| ವಿಮಾನ ಹಾಗೂ ರೈಲುಗಳು ಕಾರ್ಯನಿರ್ವಹಿಸುತ್ತಿವೆ| ಲಾಕ್‌ಡೌನ್‌ ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ಸಾಕಷ್ಟು ಕ್ರಮ ತೆಗೆದುಕೊಳ್ಳಲಾಗಿದೆ|

ಬೆಂಗಳೂರು(ಜು.16): ನಗರವನ್ನು ನಿದ್ರೆ ಮಾಡಿಸಬಹುದು. ಆದರೆ ಸ್ಮಶಾನ ಮಾಡಲಾಗುವುದಿಲ್ಲ. ಎಲ್ಲದಕ್ಕೂ ಲಾಠಿಯೇಟು ಪರಿಹಾರವಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಎಸ್‌.ಭಾಸ್ಕರ್‌ ರಾವ್‌ ಮಾರ್ಮಿಕವಾಗಿ ಹೇಳಿದ್ದಾರೆ.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಲಾಠಿ ಬೀಸಿದರೆ ಕಾಯಿಲೆ ಹೋಗಲ್ಲ. ಜನರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಲಾಕ್‌ಡೌನ್‌ ಜಾರಿಯಾದರೂ ಕೆಲವು ವಲಯದ ಜನರಿಗೆ ಕೆಲಸಗಳಿರುತ್ತವೆ. ಪೀಣ್ಯದಲ್ಲಿ ಆರೋಗ್ಯ ಸಂರಕ್ಷಕ ಕಿಟ್‌ (ಪಿಪಿಇ)ಗಳ ತಯಾರಿಕೆ ನಡೆದಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ವಿದೇಶಿ ವಿನಿಮಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲೇಬೇಕಿದೆ ಎಂದು ಸ್ಪಷ್ಟಪಡಿಸಿದರು.

ಲಾಕ್‌ಡೌನ್‌ ವೇಳೆ ಸ್ವಯಂ ಸೇವಕರಾಗಿ ಸೇವೆ: ಸಿವಿಲ್‌ ವಾರ್ಡನ್‌ ಹುದ್ದೆಗೆ 8 ಸಾವಿರ ಅರ್ಜಿಗಳು!

ಜಾಗತಿಕ ಮಟ್ಟದ ಸಂಪರ್ಕ ಹೊಂದಿರುವ ದೇಶದ ಮಹಾನಗರಗಳ ಪೈಕಿ ಬೆಂಗಳೂರು ಸಹ ಒಂದಾಗಿದೆ. ಇಲ್ಲಿ ಒಂದೂವರೆ ಕೋಟಿ ಜನ ಸಂಖ್ಯೆ ಇದೆ. ಕೆಲವು ಅವಶ್ಯಕ ಚಟುವಟಿಕೆಗಳನ್ನು ನಡೆಸಲೇಬೇಕಾಗುತ್ತದೆ. ಹಾಗಾಗಿ ಬೆಂಗಳೂರ ಅನ್ನು ಪೂರ್ತಿ ಮಲಗಿಸಬಹುದು. ಆದರೆ ಸ್ಮಶಾನ ಮಾಡಲಾಗುವುದಿಲ್ಲ ಎಂದು ತೀಕ್ಷ್ಣವಾಗಿ ಹೇಳಿದರು.

ಬೆಂಗಳೂರಿನಲ್ಲಿ ಎಲ್ಲ ವಲಯದ ಕಾರ್ಯಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ವಿಮಾನ ಹಾಗೂ ರೈಲುಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಕೆಲವು ಜನರು ಮನೆಯಿಂದ ಹೊರ ಬಂದಿದ್ದಾರೆ. ಲಾಕ್‌ಡೌನ್‌ ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ಸಾಕಷ್ಟು ಕ್ರಮ ತೆಗೆದುಕೊಳ್ಳಲಾಗಿದೆ. ಜನರಿಗೆ ಕೂಡಾ ಜಾಗೃತಿ ಮೂಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!