ಉಡುಪಿ ಜಿಲ್ಲೆಯಲ್ಲಿ ಮೇಘಸ್ಫೋಟ?: ದಿಢೀರ್ ಉಕ್ಕೇರಿದ ನದಿ, 10 ಮನೆಗಳು ಮುಳುಗಡೆ

Published : Oct 07, 2024, 08:51 AM IST
ಉಡುಪಿ ಜಿಲ್ಲೆಯಲ್ಲಿ ಮೇಘಸ್ಫೋಟ?: ದಿಢೀರ್ ಉಕ್ಕೇರಿದ ನದಿ, 10 ಮನೆಗಳು ಮುಳುಗಡೆ

ಸಾರಾಂಶ

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮೇಘ ಸ್ಪೋಟವಾಗಿರಬಹುದು ಹೇಳಲಾಗುತ್ತಿದೆ. 2.25 ಗಂಟೆಯಲ್ಲಿ 18 ಸೆಂ.ಮೀ. ಮಳೆಯಾದ ಪರಿಣಾಮ, ಬಮ್ಮಗುಂಡಿ ನದಿಯಲ್ಲಿ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. 

ಕಾರ್ಕಳ (ಅ.07): ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮೇಘ ಸ್ಪೋಟವಾಗಿರಬಹುದು ಹೇಳಲಾಗುತ್ತಿದೆ. 2.25 ಗಂಟೆಯಲ್ಲಿ 18 ಸೆಂ.ಮೀ. ಮಳೆಯಾದ ಪರಿಣಾಮ, ಬಮ್ಮಗುಂಡಿ ನದಿಯಲ್ಲಿ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. ಇದರಿಂದ ಹೆಬ್ರಿ ತಾಲೂಕಿನ ಮು ದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿ ಯಲ್ಲಿ 10ಕ್ಕೂ ಹೆಚ್ಚು ಮನೆಗಳು ಸಂ ಪೂರ್ಣ ಮುಳುಗಡೆಯಾಗಿವೆ. ಜಮನಿಗೆ ನೀರು ನುಗ್ಗಿದೆ 2 ಕಾರು, ಎರಡು ಬೈಕ್‌ಗಳು ಸೇರಿ 4 ವಾಹನಗಳು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಆದರೆ ಯಾ ವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

ಮೇಘ ಸ್ಫೋಟದ ಶಂಕೆ: ಪಶ್ಚಿಮಘಟ್ಟ ಗಳ ಸಾಲಿನಲ್ಲಿ ಮಧ್ಯಾಹ್ನ 2.30ರ ವೇಳೆಗೆ ಸಿಡಿಲಬ್ಬರ ಹಾಗೂ ಭಾರೀ ಗಾಳಿಯಿಂದ ಕೂಡಿದ ಮಳೆ ಸುರಿದಿದೆ. ಇದರಿಂದಾಗಿ ನದಿಯಲ್ಲಿ ಹಠಾತ್ ಆಗಿ ಕೆಸರು ಮಿಶ್ರಿತ ನೀರು ಏರಿಕೆಯಾಗಿದೆ. ನೀರು ತೀರಪ್ರದೇಶದ ಮನೆಗಳ ಅಂಗಳಕ್ಕೆ ನುಗ್ಗಿದ್ದು, ಹೊಸಕಂಬದ ಕೃಷ್ಣ ಪೂಜಾರಿ ಅವರ ಕಾರು ಹಾಗೂ ಪಕ್ಕದ ಕೇರಳ ಮೂಲದ ಕುಟುಂಬ ನಿಲ್ಲಿಸಿದ್ದ ಕಾರು, ಎರಡು ಬೈಕ್‌ಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ.ಮಧ್ಯಾಹ್ನ 2.25ಕ್ಕೆ ಆರಂಭವಾದ ಮಳೆ 5 ಗಂಟೆವರೆಗೆ ಮುಂದುವರಿದಿತ್ತು. 

ಕಬ್ಬಿನಾಲೆ ತಿಂಗಳಮಕ್ಕಿ ಪ್ರದೇಶಗಳಲ್ಲಿ ಮೇಘ ಸ್ಫೋಟವಾಗಿದೆಯೇ ಅಥವಾ ಗುಡ್ಡ ಜರಿದಿದೆಯೇ ಎಂಬ ಕುರಿತು ಖಚಿತ ಮಾಹಿತಿ ಲಭಿಸಿಲ್ಲ. ಜೀವಮಾನ ದಲ್ಲಿ ಈ ಭಾಗದಲ್ಲಿ ಇಂತಹ ಭೀಕರ ಪ್ರವಾಹ ನಾವು ನೋಡಿಲ್ಲವೆಂದು ಸ್ಥಳೀ ಯರು 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ. ಹಠಾತ್ ನೆರೆಯಿಂದ ನಾಗರಿಕರು ಆತಂಕಗೊಂಡಿದ್ದಾರೆ. ಈ ಪರಿಸದಲ್ಲಿ ಭಾರಿ ಗಾಳಿಗೆ ಮರಗಳು ಬಿದ್ದಿದ್ದು 25ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಿದ್ಯುತ್ ಪೂರೈಕೆ ಸಂ ಪೂರ್ಣ ಸ್ಥಗಿತಗೊಂಡಿದೆ. ಬಮ್ಮಗುಂಡಿ ನದಿಯ ಸುತ್ತಮುತ್ತಲಿನ ಪ್ರದೇಶದ ಒಟ್ಟು 150 ಎಕರೆ ಕಟಾವಿಗೆ ಬಂದಿದ್ದ ಬತ್ತ, ರಬ್ಬರ್, ಅಡಕೆ, ತೆಂಗು, ಬಾಳೆ ತೋಟ ಸಂಪೂರ್ಣ ನಾಶವಾಗಿದೆ. 

ಸಿದ್ದರಾಮಯ್ಯ ಪತ್ನಿಯನ್ನು ನಾವು ಹೊರಗೆ ತಂದಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಓಟಕ್ಕಿತ್ತ ಪ್ರವಾಸಿಗರು: ಕಬ್ಬಿನಾಲೆ ಅಬ್ಬಿ ಜಲಪಾತ ವೀಕ್ಷಿಸುತಿದ್ದ ವೇಳೆ ಜಲಪಾತದ ನೀರು ಭಾರೀ ಏರಿಕೆಯಾಯಿತು ಹಾಗೂ ಒಮ್ಮೆಲೆ ಸುರಿದ ಭಾರಿ ಮಳೆ ಯನ್ನು ಗಮನಿಸಿ ಪ್ರವಾಸಿಗರು ಸ್ಥಳದಿಂದ ಓಟಕ್ಕಿತ್ತಿದ್ದಾರೆ. ಪ್ರವಾಹವನ್ನು ನೋಡಿ ನಮ್ಮ ಜೀವ ಉಳಿಸುವುದೇ ಬಲುದೊಡ್ಡ ಸಾಹಸವಾಗಿತ್ತು ಎಂದು ಪ್ರವಾಸಿಗ ಕುಂದಾಪುರದ ಪ್ರದೀಪ್ ತಿಳಿಸಿದ್ದಾರೆ. ಕಬ್ಬಿನಾಲೆ ಸೇತುವೆ ಮೇಲೆ ಯೂ ಪ್ರವಾಹದ ನೀರು ಹರಿದಿದ್ದು ಸಂಪೂರ್ಣ ಜಲಾವೃತವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಧಾವಿ ಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!