
ಬೆಂಗಳೂರು (ಮೇ.21): 15 ಸಾವಿರ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, ಈ ಸಂಬಂಧ ಶೀಘ್ರ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.
ಅಲ್ಲದೆ, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನ (ಎಡಿಬಿ) ₹2000 ಕೋಟಿ ನೆರವಿನಿಂದ 500 ಶಾಲೆಗಳು ಸೇರಿ ಮುಂದಿನ ಮೂರು ವರ್ಷಗಳಲ್ಲಿ ₹3500 ಕೋಟಿ ವೆಚ್ಚದಲ್ಲಿ ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಉನ್ನತೀಕರಿಸುವ ಯೋಜನೆಗೆ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಿದರು. ಈ ನಿಟ್ಟಿನಲ್ಲಿ ಜೂ.1ರಂದು ಶಿವಮೊಗ್ಗದಲ್ಲಿ ಕೆಪಿಎಸ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ಸಮ್ಮತಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಇಲಾಖಾ ವಿಷಯಗಳ ಕುರಿತು ಮುಖ್ಯಮಂತ್ರಿ ಸಭೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ