ಮೇಕೆದಾಟು ಡಿಪಿಆರ್‌ಗೆ ಅನುಮೋದನೆ: ಸಿಎಂ ಬೊಮ್ಮಾಯಿ ವಿಶ್ವಾಸ

Published : Jun 17, 2022, 02:00 AM IST
ಮೇಕೆದಾಟು ಡಿಪಿಆರ್‌ಗೆ ಅನುಮೋದನೆ: ಸಿಎಂ ಬೊಮ್ಮಾಯಿ ವಿಶ್ವಾಸ

ಸಾರಾಂಶ

*  ಸುಪ್ರೀಂನಿಂದ ಯಾವುದೇ ತಡೆಯಾಜ್ಞೆ ಇಲ್ಲ *  ತಮಿಳುನಾಡಿನ ಹೇಳಿಕೆಗೆ ಪ್ರತಿಕ್ರಿಯಿಸಬೇಕಿಲ್ಲ *  ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ  

ದಾವಣಗೆರೆ(ಜೂ.17):  ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರದ ಮುಂದೆ ರಾಜ್ಯದ ವಾದ ಮಂಡಿಸಿದ್ದು, ಮುಂದಿನ ವಾರ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಿನ್ನೆ(ಗುರುವಾರ) ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್‌ನಲ್ಲಿ ಯಾವುದೇ ತಡೆಯಾಜ್ಞೆಯೂ ಇಲ್ಲ. ಈ ವಿಚಾರದಲ್ಲಿ ನೆರೆಯ ತಮಿಳನಾಡಿನ ಎಲ್ಲಾ ಹೇಳಿಕೆಗಳಿಗೆ ನಾವು ಪದೇಪದೇ ಉತ್ತರ ಕೊಡಬೇಕಾದ ಅವಶ್ಯಕತೆ ಇಲ್ಲ ಅಂತ ತಿಳಿಸಿದ್ದಾರೆ. 

Davanagere: ಜನರೇ ಕಾಂಗ್ರೆಸನ್ನು ಮನೆಗೆ ಚಲೋ ಮಾಡಲಿದ್ದಾರೆ: ಸಿಎಂ ಬೊಮ್ಮಾಯಿ ವ್ಯಂಗ್ಯ

ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ. ಮುಂದಿನ ವಾರ ಪ್ರಾಧಿಕಾರ ಸಭೆ ಕರೆಯುವ ಸಾಧ್ಯತೆ ಇದೆ. ಅಂದಿನ ಸಭೆಯಲ್ಲಿ ರಾಜ್ಯದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Karnataka By-Election Results 2026 LIVE: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!