
ಬೆಂಗಳೂರು(ಜ.11): ವಿದ್ಯುತ್ ಮಗ್ಗ ನೇಕಾರರಿಗೆ/ಕಾರ್ಮಿಕರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವಿನ ನೇರ ನಗದು ವರ್ಗಾವಣೆಗೆ (ಡಿಬಿಟಿ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಬುಧವಾರ) ಚಾಲನೆ ನೀಡಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬೆಳಗ್ಗೆ 11.30ಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು ಮತ್ತು ಕಾರ್ಮಿಕರಿಗೆ 2022-23ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.
ಸಂಕ್ರಾಂತಿಗೆ ವಿದ್ಯುತ್ ಮಗ್ಗ ನೇಕಾರರಿಗೂ 5000 ರು.: ಸಿಎಂ ಬೊಮ್ಮಾಯಿ
ಐದು ಸಾವಿರ ರು. ವಾರ್ಷಿಕ ಆರ್ಥಿಕ ನೆರವನ್ನು ಡಿಬಿಟಿ ಮೂಲಕ ಒದಗಿಸಲಾಗುವುದು. ಗಣತಿಯಲ್ಲಿ ಈವರೆಗೆ ನೋಂದಾಯಿತರಾದ 1,02,980 ನೇಕಾರರು/ಕಾರ್ಮಿಕರು ತಲಾ ಐದು ಸಾವಿರ ರು. ನೆರವನ್ನು ಪಡೆಯಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೇಕಾರರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದರು. ಹೀಗಾಗಿ ಆರ್ಥಿಕ ನೆರವು ಒದಗಿಸಲು ಚಾಲನೆ ನೀಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ