
ಮೈಸೂರು(ಜ.28): ಕಳೆದ ಬಾರಿಯಂತೆ ಈ ಬಾರಿಯೂ ಜನಪರ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಉದ್ದೇಶದಿಂದ ಮಾತ್ರವಲ್ಲ, ಕಳೆದ ಬಾರಿಯೂ ಜನಪರ ಬಜೆಟ್ ನೀಡಿದ್ದೆವು. ಈಗಲೂ ಜನಪರವಾದ ಬಜೆಟ್ ನೀಡುತ್ತೇವೆ ಎಂದರು.
ಕಳೆದ ಬಾರಿ ಬಜೆಟ್ನಲ್ಲಿ ನಾವು ಏನೆಲ್ಲಾ ಘೋಷಣೆ ಮಾಡಿದ್ದೆವು. ಏನೆಲ್ಲಾ ಈಡೇರಿಸಿದ್ದೇವೆ ಎಂಬುದನ್ನು ಬಜೆಟ್ ಮಂಡನೆ ವೇಳೆ ತಿಳಿಸುತ್ತೇವೆ ಎಂದರು.
ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಬಂಪರ್?
ಟಾಸ್ಕ್ ಫೋರ್ಸ್:
ಚಿರತೆ ಮತ್ತು ಆನೆ ಸೆರೆ ಹಿಡಿಯಲು ರಚಿಸಲಾದ ಟಾಸ್ಕ್ ಫೋರ್ಸ್ಗಳು ಇರುತ್ತವೆ. ಒಂದು ಕಾರ್ಯಾಚರಣೆ ಮುಗಿದ ಕೂಡಲೇ ಅವರನ್ನು ರದ್ದು ಪಡಿಸು ವುದಿಲ್ಲ, ಟಾಸ್ಕ್ ಫೋರ್ಸ್ ನಿರಂತರವಾಗಿ ಇರುತ್ತದೆ ಎಂದರು. ಭಾಗ್ಯವೇ ಕಾಂಗ್ರೆಸ್ಗೆ ದೌರ್ಭಾಗ್ಯ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶಾದಿ ಭಾಗ್ಯ, ಅನ್ನ ಭಾಗ್ಯ ನೀಡುವುದಾಗಿ ಹೇಳಿದ್ದರು. ಆದರೆ ಪಕ್ಷಕ್ಕೆ ಹಿಂದಿನ ಭಾಗ್ಯವೇ ದೌರ್ಭಾಗ್ಯವಾಗಿದೆ. ಅದೇ ಬೇಕು ಎಂದಾದರೆ ಮುಂದುವರೆಸಿಕೊಂಡು ಹೋಗಲಿ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ