ಗಡಿ ವಿಚಾರದಲ್ಲಿ ಕರ್ನಾಟಕದ ಹಿತರಕ್ಷಣೆಗೆ ಹಿಂದೇಟು ಇಲ್ಲ: ಸಿಎಂ ಬೊಮ್ಮಾಯಿ

Published : Dec 23, 2022, 10:00 PM IST
ಗಡಿ ವಿಚಾರದಲ್ಲಿ ಕರ್ನಾಟಕದ ಹಿತರಕ್ಷಣೆಗೆ ಹಿಂದೇಟು ಇಲ್ಲ: ಸಿಎಂ ಬೊಮ್ಮಾಯಿ

ಸಾರಾಂಶ

ಗಡಿ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ವಿಚಾರ ನ್ಯಾಯಾಲಯದಲ್ಲಿರುವಾಗ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಮಹಾರಾಷ್ಟ್ರದ ನಾಯಕರು ಮಾಡಬಾರದು. ಅದರಲ್ಲೂ ಪ್ರಚೋದನೆ ನೀಡುವ ಅಸಂಬದ್ಧ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಿಲ್ಲ ಎಂದ ಸಿಎಂ ಬೊಮ್ಮಾಯಿ 

ಸುವರ್ಣಸೌಧ(ಡಿ.23): ಗಡಿ ವಿವಾದ ಕುರಿತು ಕರ್ನಾಟಕದ ನಿಲುವು ಸಮರ್ಪವಾಗಿದ್ದು, ರಾಜ್ಯದ ಹಿತ ಕಾಪಾಡಲು ಯಾವುದೇ ಕಾರಣಕ್ಕೂ ಹಿಂದೇಟು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ವಿಚಾರ ನ್ಯಾಯಾಲಯದಲ್ಲಿರುವಾಗ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಮಹಾರಾಷ್ಟ್ರದ ನಾಯಕರು ಮಾಡಬಾರದು. ಅದರಲ್ಲೂ ಪ್ರಚೋದನೆ ನೀಡುವ ಅಸಂಬದ್ಧ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಿಲ್ಲ ಎಂದು ತಿಳಿಸಿದರು.

ಮಹಾರಾಷ್ಟ್ರದ ವಿಪಕ್ಷದ ಸದಸ್ಯರು ಗಡಿಗೆ ನುಗ್ಗಿಸುವುದಾಗಿ ಹೇಳುತ್ತಾರೆ. ಅವರು ಚೀನಾ ಸೇನೆ ಭಾರತಕ್ಕೆ ನುಗ್ಗಿದಂತೆ ಬೆಳಗಾವಿಗೆ ನುಗ್ಗಿದರೆ ಕನ್ನಡಿಗರು ಭಾರತೀಯ ಸೈನ್ಯದಂತೆ ಅವರನ್ನು ಹಿಮ್ಮೆಟ್ಟಿಸುವರು ಎಂದು ಬೊಮ್ಮಾಯಿ ಅವರು ಪುನರುಚ್ಚರಿಸಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ, ಎಚ್‌ಕೆಪಿ

ಇನ್ನು ಕರ್ನಾಟಕಕ್ಕೆ ಕೃಷ್ಣಾ ನದಿ ನೀರು ಬಿಡಬಾರದು ಎಂಬ ಮಹಾರಾಷ್ಟ್ರ ವಿಪಕ್ಷ ಶಾಸಕರ ಹೇಳಿಯೂ ಅಸಂಬದ್ಧ. ದೇಶದ ಬಹುತೇಕ ನದಿಗಳು ಮೂರ್ನಾಲ್ಕು ರಾಜ್ಯಗಳಲ್ಲಿ ಹರಿಯುತ್ತಿವೆ. ಅಂತರ್‌ರಾಜ್ಯ ನದಿಗಳು ಅಂತರ್‌ರಾಜ್ಯ ಜಲ ವಿವಾದ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ರಾಜ್ಯಗಳು ಪರಸ್ಪರ ಸಹಕಾರ ನೀಡಬೇಕಿರುತ್ತದೆ. ರಾಜ್ಯಗಳ ನಡುವೆ ನಿಲುವುಗಳಲ್ಲಿ ವ್ಯತ್ಯಾಸವಿದ್ದರೂ ಇಂತಹ ಹೇಳಿಕೆಗಳನ್ನು ನೀಡಬಾರದು. ಇಂತಹ ಉದ್ಧಟತನದ ಮಾತುಗಳಿಂದ ಏನೂ ಪ್ರಯೋಜನವಿಲ್ಲ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್